fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಡಿಸೆಂಬರ್ 31, 2014

ಚುಕ್ಕಿಯ ಕಮಲ



ಹಲವಾರು ಚುಕ್ಕಿ ಸೇರಿ ಒಂದು ಸುಂದವಾದ ಕಮಲ ಅರಳಿದೆ.

ಶುಕ್ರವಾರ, ಡಿಸೆಂಬರ್ 26, 2014

ಅಗ್ಘವಣಿ ಹಂಪಯ್ಯ -1

ಅಗ್ಘವಣಿ ಹಂಪಯ್ಯ -2

 ಹಂಸಪತಿ ಗರುಡಪತಿ ವೃಷಭಪತಿ
ಮೊದಲಾದ ಸರ್ವಜೀವಾಧಿಪತಿ
ದೇವರಾಯ ಮಹಾರಾಯನ ಅರಸುತನ ಹೊಸತು:
ಓಲಗಕ್ಕೆ ಬಾರ, ಸಿಂಹಾಸನದಲ್ಲಿ ಕುಳ್ಳಿರ,
ಸ್ತ್ರೀಲಂಪಟನಾಗಿ ಅಂತಃಪುರವ ಬಿಟ್ಟು ಹೊರವಂಡ.
ಕಪ್ಪಕಾಣಿಕೆಯನೊಪ್ಪಿಸಿಕೊಂಬವರಿಲ್ಲ,
ಗುರುವೆಂಬ ತಳವಾರನ ಆಜ್ಞೆ ಕೆಟ್ಟಿತ್ತು,
ತೆರೆದ ಬಾಗಿಲ ಮುಚ್ಚುವರಿಲ್ಲ,
ಮುಚ್ಚಿದ ಬಾಗಿಲ ತೆರೆವವರಿಲ್ಲ.
ಹಂಪೆಯ ವಿರುಪಯ್ಯನ ಅರಸುತನ ಕೆಟ್ಟಿತ್ತು,
ಭಕ್ತರೆಂಬವರಿನ್ನು ಬದುಕಲೇ ಬಾರದು.
              -----> ಅಗ್ಘವಣಿ ಹಂಪಯ್ಯ

ಭಾನುವಾರ, ಡಿಸೆಂಬರ್ 14, 2014

ಪವಿತ್ರ ಶೈವಕ್ಷೇತ್ರ ಮಹಾಕೂಟ

Mahakuteswara, Mahakuta, ಮಹಾಕೂಟೇಶ್ವರ, ಮಹಾಕೂಟ*ಟಿ.ಎಂ.ಸತೀಶ್
          ಚಾಲುಕ್ಯರ ಕಾಲದ ಪ್ರಸಿದ್ಧ ಪುಣ್ಯಕ್ಷೇತ್ರ ಬಾದಾಮಿಯ ಪೂರ್ವಕ್ಕೆ ಸುಮಾರು 5 ಕಿಲೋ ಮೀಟರ್ ದೂರದ ನಂದಿಕೇಶ್ವರ ಗ್ರಾಮದ ಬಳಿ ಇರುವ ಮತ್ತೊಂದು ತೀರ್ಥಕ್ಷೇತ್ರ ಮಹಾಕೂಟ.
       ವಿರಳ ಹಾಗೂ ಬಹು ಅಪರೂಪದ ಗಿಡಮರಗಳಿಂದ ಕೂಡಿದ ಕಾನನ ಪ್ರದೇಶದಲ್ಲಿ ಅಚ್ಛಾದಿತವಾದ ನಸುಗೆಂಪು ಮರಳು ಕಲ್ಲಿನ ಎರಡು ಬೆಟ್ಟಗಳ ನಡುವೆ ಇರುವುದೇ ಮಹಾಕೂಟವೆಂಬ ಪುಣ್ಯಕ್ಷೇತ್ರ.
ಇಲ್ಲಿ ಮಹಾಕೂಟೇಶ್ವರ ಮತ್ತು ಮಲ್ಲಿಕಾರ್ಜುನ ದೇಗುಲಗಳಿವೆ. ಈ ಎರಡು ದೇವಾಲಯಗಳ ಮಧ್ಯೆ ಸುಂದರವಾದ ಪುಷ್ಕರಣಿಯಿದ್ದು ಇದರ ಸುತ್ತಲೂ ಹಲವಾರು ಸಣ್ಣ ಪುಟ್ಟ ದೇವಾಲಯಗಳಿವೆ. ಹಲವು ಭಿನ್ನ ವಿಗ್ರಹಗಳನ್ನು ಪುಷ್ಕರಣಿಯ ಸುತ್ತಲೂ ಜೋಡಿಸಿಡಲಾಗಿದೆ.
ಮಹಾಕೂಟೇಶ್ವರ ದೇವಾಲಯ, ಮಹಾಕೂಟ, Mahakuta, mahakoota,    ಪುಷ್ಕರಣಿಯಲ್ಲಿ ಮುಖಲಿಂಗ ಮಂಟಪ ಇದೆ. ಮುಖಲಿಂಗ ಮಂಟಪದಲ್ಲಿರುವ ಶಿವಲಿಂಗದಲ್ಲಿ  ನಾಲ್ಕುಮುಖದ ಅಪರೂಪದ ಶಿವಲಿಂಗವಿದೆ. ಅತ್ಯಂತ ಕಲಾತ್ಮಕವಾದ ಹಾಗೂ ಸೂಕ್ಷ್ಮ ಕೆತ್ತನೆಗಲಿಂದ ಕೂಡಿದ ಈ ಲಿಂಗದಲ್ಲಿರುವ ಶಿವನ ಶಿರದಲ್ಲಿ ಗುಂಗುರು ಗುಂಗುರು ಕೂದಲನ್ನೂ ಸಹ ಶಿಲ್ಪಿ ಮನೋಹರವಾಗಿ ಕೆತ್ತಿದ್ದಾನೆ.span>
ಮಹಾಕೂಟೇಶ್ವರ ಹಾಗೂ ಮಲ್ಲಿಕಾರ್ಜುನನ ದರ್ಶನಕ್ಕೆ ಬರುವ ಭಕ್ತರು,  ಪುಷ್ಕರಣಿಯಲ್ಲಿ  ಮೊದಲು ಸ್ನಾನ ಮಾಡಿ ನಂತರ ದೇವರ ಮಾಡುತ್ತಾರೆ.
ಮಹಾಕೂಟೇಶ್ವರ ಹಾಗೂ ಮಲ್ಲಿಕಾರ್ಜುನ ದೇವರ ದೇವಾಲಯಗಳನ್ನು ಒಂದೇ ಮಾದರಿಯಲ್ಲಿ ನಿರ್ಮಿಸಲಾಗಿದೆ. ಬೆಟ್ಟಗಳ ಮಹಾಕೂಟೇಶ್ವರ ದೇವಾಲಯ, ಮಹಾಕೂಟ, Mahakuta, mahakoota,ಸಾಲಿನ ನಡುವೆ, ಹಸಿರುವನ ರಾಶಿಯ ನಡುವೆ ಕಂಗೊಳಿಸುವ ಈ ದೇಗುಲಗಳ ರಮಣೀಯವಾಗಿ ಕಾಣುತ್ತವೆ.
       ಈ ದೇಗುಲಗಳಲ್ಲಿ  ಚೌರಸ ಗರ್ಭಗೃಹವಿದೆ. ಇದಕ್ಕಿಂತ ಅಗಲವಾದ ಸಭಾ ಮಂಟಪ ಹಾಗೂ ಕಿರಿದಾದ ಮುಖಮಂಟಪವಿದೆ. ಗರ್ಭಗುಡಿಯ ಮೇಲೆ ದ್ರಾವಿಡ ಶೈಲಿಯ ಶಿಖರವಿದೆ.  ಎತ್ತರದ ಅಷ್ಠಾನ ಅಡ್ಡ ಪಟ್ಟಿಕೆಗಳಲ್ಲಿ ಹೆಚ್ಚಾಗಿ ಶಿವಪುರಾಣಗಳಿಗೆ ಸಂಬಂಧಿಸಿದ ಲೌಕಿಕ ವಿಷಯದ ಶಿಲ್ಪಗಳಿವೆ. ಹೊರ ಬಿತ್ತಿಗಳಲ್ಲಿ  ಜಾಲಂದ್ರವಿದೆ. ಅರ್ಧನಾರೀಶ್ವರನ ಸುಂದರ ಕೆತ್ತನೆ ಮನಮೋಹಕವಾಗಿದೆ.
ಮಹಾಕೂಟೇಶ್ವರ ದೇವಾಲಯ, ಮಹಾಕೂಟ, Mahakuta, mahakoota,     ದೇವಾಲಯದ ಎದುರು ಹೊರಭಾಗದಲ್ಲಿರುವ ನಂದಿಯ ಹಿಂಭಾಗದಲ್ಲಿ ಪ್ರವೇಶದ್ವಾರಕ್ಕೆ ಎದುರುಮುಖವಾಗಿ ಗಣಪನ ವಿಗ್ರಹವಿದೆ. ಭಕ್ತರು ಈ ಗಣಪನಿಗೆ ವಿಶೇಷ  ರೀತಿಯಲ್ಲಿ ಪೂಜೆ ಸಲ್ಲಿಸುತ್ತಾರೆ. ಅದೇನು ಗೊತ್ತೆ, ಈ ಗಣಪನ ಹೊಕ್ಕಳಿಗೆ ಭಕ್ತರು ಎಣ್ಣೆ ಹಚ್ಚುತ್ತಾರೆ.


        ಗಣಪನ ಡೊಳ್ಳುಹೊಟ್ಟೆಯಲ್ಲಿ ಹೊಕ್ಕುಳ ಜಾಗದಲ್ಲಿ ದೊಡ್ಡದೊಂದು ರಂದ್ರವಿದೆ. ಭಕ್ತರು ಈ ರಂದ್ರದಲ್ಲಿ ಎಣ್ಣೆ ಸುರಿಯುತ್ತಾರೆ.Mahakoota Ganesha, ಮಹಾಕೂಟೇಶ್ವರ ದೇವಾಲಯ ಗಣೇಶ, ಮಹಾಕೂಟ, ಬಾದಾಮಿ, ಪಟ್ಟದಕಲ್ಲು, ಐಹೊಳೆ.ಈ ದೇವಾಲಯ 8ನೇ ಶತಮಾನದಲ್ಲಿ ನಿರ್ಮಾಣವಾಗಿದೆ ಎಂಬುದು ಇಲ್ಲಿನ ಅರ್ಚಕರ ಅಂಬೋಣ..... ದೇವಾಲಯದ ಸುತ್ತ  ಅಗಸ್ತ್ತ್ಯೆಶ್ವರ, ವೀರಭದ್ರೇಶ್ವರ ಮೊದಲಾದ ಹಲವಾರು ಚಿಕ್ಕ ಗುಡಿಗಳಿವೆ.
        ಪ್ರಮುಖ ದೇಗುಲದ ಹೊರಬಿತ್ತಿಯ ಮೇಲೆ ವಿಷ್ಣು, ಸ್ಥಾನಕಬ್ರಹ್ಮ, ಅರ್ಧ ನಾರೀಶ್ವರ, ಪರಶುಧರ ಶಿವ, ತ್ರಿಶೂಲಧಾರಿ ಶಿವ ಮೊದಲಾದ ಕೆತ್ತನೆ ಇದೆ. ಕೆಳ ಪಟ್ಟಿಕೆಗಳಲ್ಲಿ  ಸುಂದರ ಶಿಲ್ಪಕಲಾ ಕೆತ್ತನೆ ಇದೆ. ಇಲ್ಲಿ  ಸೂಕ್ಷ್ಮ ಕೆತ್ತನೆ ಇಲ್ಲದಿದ್ದರೂ ಮನೋಹರವಾದ ಶಿಲ್ಪಕಲಾ ಸೌಂದರ್ಯವಿದೆ.
ಬಾದಾಮಿ ಚಾಲುಕ್ಯರ ನಾಡಿನಲ್ಲಿ  ಶಿಲೆಗಳೂ ಸಂಗೀತವನ್ನು ಹಾಡುತ್ತವೆ. ವಿಶೇಷ ವಾಸ್ತು ಶೈಲಿಯ ಸುಂದರ ದೇವಾಲಯಗಳು ಆಸ್ತಿಕರಿಗೆ ಭಕ್ತಿಭಾವ ಮೂಡಿಸಿದರೆ, ನಾಸ್ತಿಕರನ್ನು ತಮ್ಮ ಕಲಾಶ್ರೀಮಂತಿಕೆಯಿಂದ ಕೈಬೀಸಿ ಕರೆಯುತ್ತವೆ.
ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-22352901 /22352909 /22352903 Email : kstdc@vsnl.in

ಬುಧವಾರ, ಡಿಸೆಂಬರ್ 10, 2014

ನುಡಿಮುತ್ತು 18

ತಾಯಿ ಇಲ್ಲದ ತವರಿಗೆ ಮಗಳು ಬಂದರೆ ಉರಿಬೇಸಗೆಯಲ್ಲಿ ಮರಳು ಗಾಡಿಗೆ ಬಂದಂತೆ.
-ಅನಕೃ

ತಾಯಿ ಮತ್ತು ತಾಯ್ನಾಡು ಸ್ವರ್ಗಕ್ಕಿಂತ ಮಿಗಿಲು.
-ಲೋಕೋಕ್ತಿ

ದುಡಿಮೆ ಮುನ್ನಡೆಗೆ ಕೀಲಿ.
-ನಾಣ್ನುಡಿ

ದೇವರು ಒಬ್ಬನೇ. ಅವನನ್ನು ಭಾವಿಸುವ ಮನಸ್ಸುಗಳು ಮಾತ್ರ ಅನೇಕ.
-ಉಪನಿಷತ್

ದುಡ್ಡು ಎಂದರೆ ದುಡಿದು ತರಬೇಕಾದ ವಸ್ತು.
-ನಾ.ಕಸ್ತೂರಿ

ಕಾಲ ಎನ್ನುವುದು ನಿಂತ ನೀರಲ್ಲ ಹರಿಯುತ್ತಿರುವ ಪ್ರವಾಹ.
-ಷೇಕ್ಸ್ ಪಿಯರ್

ಕಳೆದುಹೋದ ಸುಖವನ್ನು ನೆನಪಿಸಿಕೊಳ್ಳುವುದೇ ದುಃಖಗಳಲ್ಲಿ ದುಃಖ.
-ಷೇಕ್ಸ್ ಪಿಯರ್

ಕಣ್ಣುಗಳ ಬದಲಾಗಿ ಹೃದಯದಿಂದ ನೋಡುವುದೇ ತಾಳ್ಮೆ.
-ನೋಟ್ಸ್

ಕಾವ್ಯೋಪಾಸನೆಯು ಉತ್ತಮ ಆತ್ಮ ಸಂಸ್ಕಾರ.
-ಡಿವಿಜಿ

ಕೀರ್ತಿ ಬಂದಾಗ ನೆನಪಿನ ಶಕ್ತಿ ಅಳಿಯುತ್ತದೆ.
-ಹೆನ್ರಿವಾರ್ಡ್ ಬೇಚರ್

                                             ಕೃಪೆ : ಮಾ.ಕೃ.ಮಂಜು

ಸೋಮವಾರ, ಡಿಸೆಂಬರ್ 01, 2014

ಟಾಪ್ - 3 ನವೆಂಬರ್- 2014

 ನನ್ನ ಜಾಲತಾಣ ಅತೀ ಹೆಚ್ಚು ವೀಕ್ಷಣೆಗಳು ( ಟಾಪ್ - 3 ) ನವೆಂಬರ್- 2014
ಪ್ರಕಟನೆಗಳ ವೀಕ್ಷಣೆ ಟಾಪ್ 3 
  ರಾಷ್ಟ್ರಗಳ ಪ್ರಕಾರ ವೀಕ್ಷಣೆ ಟಾಪ್ 3
ಭಾತರ
ಅಮೇರಿಕಾ ಸಂಯುಕ್ತ ಸಂಸ್ಥಾನ
ಸ್ಪೇನ್

ಬ್ರೌಸರ್ಗಳ ಪ್ರಕಾರ ವೀಕ್ಷಣೆ ಟಾಪ್ 

 Firefox

Crome

Internet Explore


ಆಪರೇಟಿಂಗ್ ಸಿಸ್ಟಮ್ಗಳ ವೀಕ್ಷಣೆ ಟಾಪ್ 3 

Windows 

Android 

Macintosh

ಆಪರೇಟಿಂಗ್ ಸಿಸ್ಟಮ್ಗಳ ವರ್ಷನಗಳ ಪ್ರಕಾರ

                                            Windows XP
                                            Windows 7
                                          Nokia Phones
ಕಳೆದ ತಿಂಗಳಲ್ಲಿ ಪುಟಗಳ ವೀಕ್ಷಣೆ
1,369