fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಆಗಸ್ಟ್ 10, 2015

ನುಡಿಮುತ್ತು 25

ಕ್ರಾಂತಿಕಾರಿಯಾಗುವುದಕ್ಕಿಂದ ಮೊದಲು ನೀನು ಒಬ್ಬ ಮನುಷ್ಯನಾಗಬೇಕು,ದುರ್ಬಲರು ಯಾರೇ ಅಗಲಿ ಅವರಿಗಾಗಿ ಶ್ರಮಿಸಬೇಕು.
- ಜೇನ್ ಫೊಂಡಾ

"ಎಂಥ ನಾಡಿದು ಯೆಂಥ ಕಾಡಾಯಿತೋ"
 ರಂಶ್ರೀಮುಗಳಿ.

ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.
ವಿನೋಬಾ ಭಾವೆ

ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.
— ಮನುಸ್ಮೃತಿ

ಜೀವನದಲ್ಲಿ ಸ್ನೇಹಕ್ಕಿಂತ ಮಿಗಿಲಾದ ಸಂಬಂಧ ಬೇರೆಯಿಲ್ಲ, ಕಷ್ಟ ಕಾಲದಲ್ಲಿ ಕೈ ಹಿಡಿದು ನಡೆಸುವುದೊಂದೇ ಅದೇ ಸ್ನೇಹ.

ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು.

ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಮನುಷ್ಯನ ಬಳಿ ಸೇರುತ್ತೇವೆ.
ವಿನೋಬಾ ಭಾವೆ

ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ.
— ವಿನೋಬಾ ಭಾವೆ

ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!
- ಆಲ್ಬರ್ಟ್ ಐನ್‍ಸ್ಟೈನ್

ದುರ್ಬಲಮತಿಗಿಲ್ಲಾತ್ಮ ರಸೋದಯ
ದುರ್ಬಲ ಸಮಾಜಕದು ಮೃಗ್ಯ
ಹಬ್ಬುಗೆಯರಿವರ್ಗವ ಪಳಗಿಸಿ ಮನ
ದುಬ್ಬ ಪಡೆವವರಿಗಾ ಭಾಗ್ಯ.
ಪು ತಿ

                                                           ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.