fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಮೇ 26, 2016

ಆಯ್ದಕ್ಕಿ ಮಾರಯ್ಯ

ಅಂಕಿತ ನಾಮ: ಅಮರೇಶ್ವರಲಿಂಗ
ಕಾಲ: 1160
ದೊರಕಿರುವ ವಚನಗಳು: 32 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ರಾಯಚೂರು ಜಿಲ್ಲೆ, ಲಿಂಗಸೂರ ತಾಲ್ಲೂಕಿನ ಅಮರೇಶ್ವರ
ಪರಿಚಯ: ಕಾಲ ಸು. 1160. ಸ್ಥಳ: ರಾಯಚೂರು ಜಿಲ್ಲೆ, ಲಿಂಗಸೂರ ತಾಲ್ಲೂಕಿನ ಅಮರೇಶ್ವರ. ನೆಲದಲ್ಲಿ ಚೆಲ್ಲಾಡಿದ ಅಕ್ಕಿಯನ್ನು ಆಯ್ದು ಬದುಕುವುವು ಇವನ ಕಾಯಕ ‘ಕಾಯಕವೇ ಕೈಲಾಸ’ ಎಂಬ ಪ್ರಸಿದ್ಧ ನುಡಿಗಟ್ಟು ಈತನ ವಚನದಲ್ಲಿ ದೊರೆಯುತ್ತದೆ. ಕಾಯಕ ಮತ್ತು ದಾಸೋಹ ಇವನ 32 ವಚನಗಳ ಮುಖ್ಯ ವಸ್ತುಗಳು, ನೋಡಿ: ಆಯ್ದಕ್ಕಿ ಲಕ್ಕಮ್ಮ.

ಅಹಂಕಾರವರತಲ್ಲದೆ ಗುರುಭಕ್ತನಲ್ಲ,
ಬಯಕೆ ಹಿಂಗಿಯಲ್ಲದೆ ಶಿವಲಿಂಗಪೂಜಕನಲ್ಲ,
ತ್ರಿವಿಧ ಮಲತ್ರಯದ ಬಲುಹುಳ್ಳನ್ನಕ್ಕ ಚರಸೇವಿಯಲ್ಲ.
ಇಂತೀ ಗುಣಂಗಳಲ್ಲಿ ನಿಶ್ಚಯವಾದಲ್ಲದೆ,
ಅಮರೇಶ್ವರಲಿಂಗವನರಿಯಬಾರದು.

ಅಮೃತದ ಸವಿ ಸ್ವಾದಿಸುವರಿಗಲ್ಲದೆ
ಅಮೃತ ತನ್ನ ತಾ ಸ್ವಾದಿಸದ ಪರಿಯಂತೆ
ನಿತ್ಯತೃಪ್ತಂಗೆ ಅಪ್ಯಾಯನ ಉಂಟೇ ಬಸವಣ್ಣಾ ?
ಏಳ್ನೂರೆಪ್ಪತ್ತಮರಗಣಂಗಳ ಕಟ್ಟಳೆಯ
ನೇಮದ ಕಟ್ಟು ನಿನ್ನದು ಬಸವಣ್ಣಾ.
ನಿನಗೆ ಭಾವ ನಿರ್ಭಾವವೆಂಬುದುಂಟೇ ಬಸವಣ್ಣಾ ?
ಅಮರೇಶ್ವರಲಿಂಗದಲ್ಲಿ ಸಂಗನಬಸವಣ್ಣಾ,
ನಿನ್ನ ಪಾದಕ್ಕೆ ನಮೋ ನಮೋ ಎಂಬೆನು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು