fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಆಗಸ್ಟ್ 23, 2017

ಶಿವರಾಮ ಕಾರಂತರು

ಬಹುಮುಖ ವ್ಯಕ್ತಿತ್ವದ ತ್ರಿವಿಕ್ರಮ ಪ್ರತಿಭೆಯ ಶಿವರಾಮ ಕಾರಂತರು
ಕೋಟ ಎಂಬ ಪುಟ್ಟ ಹಳ್ಳಿಯಲ್ಲಿ ಹುಟ್ಟಿ ಜ್ಞಾನಪೀಠದೆತ್ತರಕ್ಕೆ ಬೆಳೆದ ಕಾರಂತರದು ಅಸಾಧಾರಣ - ಅನುಪಮ ಪ್ರತಿಭೆ

ಕೋಟಾ ಶಿವರಾಮ ಕಾರಂತರು ಕೇವಲ ಕವಿ-ಸಾಹಿತಿ -ಲೇಖಕರಷ್ಟೇ ಅಲ್ಲ. ಅವರದು ಬಹುಮುಖ ಪ್ರತಿಭೆ. ಕಾರಂತರು ಶ್ರೇಷ್ಠ ಕನ್ನಡ ಸಾಹಿತಿಕಲಾವಿದವಿಜ್ಞಾನ ವಿಲಾಸಿ,ಅಲೆಮಾರಿಪತ್ರಕರ್ತಪ್ರಯೋಗಶೀಲನೃತ್ಯಪಟುಪರಿಸರವಾದಿಸ್ವಾತಂತ್ರ್ಯ ಹೋರಾಟಗಾರಭಾಷಾ ಶಾಸ್ತ್ರಜ್ಞ... ಹೀಗೆ ಪಟ್ಟಿ ಬೆಳೆಯುತ್ತಾ ಸಾಗುತ್ತದೆ. ಕಾರಂತರಷ್ಟು ಶ್ರದ್ಧಾಪೂರ್ಣ ಮತ್ತು ಕ್ರಿಯಾಪೂರ್ಣ ಸೇವೆಯನ್ನು ಕನ್ನಡದಲ್ಲಿ ಮತ್ತಾರೂ ಮಾಡಿಲ್ಲ ಎಂದೇ ಹೇಳಬಹುದು.

ನಡೆದಾಡುವ ವಿಶ್ವಕೋಶಕಡಲತೀರದ ಭಾರ್ಗವ ಎಂದೇ ಖ್ಯಾತರಾಗಿದ್ದ ಕಾರಂತರು ಹುಟ್ಟಿದ್ದು ಅಕ್ಟೋಬರ್ ೧೦,೧೯೦೨ರಂದು. ಹುಟ್ಟೂರು ಕಡಲ ತೀರದ ಕೋಟತಂದೆ ಶೇಷ ಕಾರಂತತಾಯಿ ಲಕ್ಷ್ಮೀ. ಲಕ್ಷ್ಮೀ -ಶೇಷಕಾರಂತ ದಂಪತಿಗಳಿಗೆ ಐದನೇ ಮಗನಾಗಿ ಜನಿಸಿದ ಕಾರಂತರುಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದಾಗಮಹಾತ್ಮಾ ಗಾಂ ಅವರ ತತ್ವಗಳಿಂದ ಪ್ರಭಾವಿತರಾಗಿ ಅಸಹಕಾರ ಚಳವಳಿಗೆ ಧುಮುಕಿದರು. ಆನಂತರ ಪತ್ರಕರ್ತರಾಗಿ,ಛಾಯಾಗ್ರಾಹಕರಾಗಿನೃತ್ಯಪಟುವಾಗಿಸಿನಿಮಾ ನಿರ್ಮಾಪಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ಕಾರಂತರು ದುಡಿದರು. ಕೈಸುಟ್ಟುಕೊಂಡರು. ಯಕ್ಷಗಾನಕೋಲಾಟ ಪ್ರದರ್ಶನದಲ್ಲಿ ಅಪ್ರತಿಮ ಯಶಸ್ಸು ಗಳಿಸಿದಕ್ಷಿಣ ಕನ್ನಡ ಜಿಲ್ಲೆಯ ಜೀವಂತ ಕಲೆಯ ಪರಿಚಯವನ್ನು ದೇಶಾದ್ಯಂತ ಮಾಡಿದರು.
ಪ್ರವಾಸಿ - ಅಲೆಮಾರಿ: ಕೆಲವನ್ನು ಬಲ್ಲವರಿಂದ ಕಲಿತುಮತ್ತೆ ಕೆಲವನ್ನು ಕೋಶ ಓದಿ ತಿಳಿದುಮತ್ತೆ ಕೆಲವನ್ನು ವಿಶ್ವಪರ್ಯಟನೆಯಿಂದ ಅರಿಯಬೇಕೆನ್ನುವ ಹಿರಿಯ ಸಿದ್ಧಾಂತವನ್ನು ತಮ್ಮ ಬಾಳಲ್ಲೂ ಅಳವಡಿಸಿಕೊಂಡ ಕಾರಂತರಿಗೆ ಸಂಚಾರ (ಅಲೆಮಾರಿತನ) ಕಲಿಸಿದ್ದು ಅಪಾರ. ಸಿಂಹಳನೇಪಾಳಬೀರುತ್ಇರಾನ್,ಆಫ್ಘಾನಿಸ್ತಾನಹಾಂಕಾಂಗ್ಜಪಾನುಗಳ ಸುತ್ತಿಬಂದ ಕಾರಂತರ ಪೂರ್ವದಿಂದ ಅತ್ಯಪೂರ್ವಕ್ಕೆ ಕೃತಿಯ ಬೆನ್ನುಡಿಯಲ್ಲಿ ಸಂಚಾರದ ಬಗ್ಗೆ ಕಾರಂತರ ಅಭಿಪ್ರಾಯ ಹೀಗಿದೆ :
...ಸಂಚಾರ ನನ್ನ ಬದುಕಿಗೆ ಅವಿರತವಾಗಿ ಬೆರೆತದ್ದುಪುಟಕೊಟ್ಟಿದ್ದುಸೂರ್ತಿಕೊಟ್ಟಿದ್ದುಬಾಹ್ಯ ಜಗತ್ತಿನ ಅನುಭವಕ್ಕೆ ಹೆದ್ದಾರಿಯಾದದ್ದು.
... ಆ ಸಂಚಾರದ ಅನುಭವಗಳೇ ನನ್ನ ಸಾಹಿತ್ಯಕ್ಕೆ ಜೀವಕಳೆಯನ್ನು ಒದಗಿಸಬೇಕು. ಸಾಹಿತ್ಯಕ್ಕೆ ಬೇಕಾದ ವಸ್ತುವನ್ನು ಸ್ವಯಂಸೂರ್ತಿಯಿಂದಲೇ ಸೃಷ್ಟಿ ಮಾಡಿಕಲ್ಪನಾವಿಲಾಸದಿಂದಲೇ ಅಲಂಕರಿಸಿ ಯಾರನ್ನೂ ಮೆಚ್ಚಿಸುವುದಕ್ಕೆ ಹೋಗಲಾರೆ. .... ಸಂಚಾರ ನನ್ನ ಪಾಲಿಗೆ ನಿತ್ಯದ ವಿದ್ಯಾಭ್ಯಾಸ.
ಕೃತಿ : ಕಾರಂತರು ನಾಲ್ಕು ಸಂಪುಟಗಳ ವಿಜ್ಞಾನ ಪ್ರಪಂಚಸಿರಿಗನ್ನಡ ಅರ್ಥಕೋಶ೪೪ ಕಾದಂಬರಿ೧೬ ನಾಟಕ೩ ಕಥಾ ಸಂಕಲನ೬ ಪ್ರಬಂಧ ಮತ್ತು ಚಿತ್ರಣಕವನ ಸಂಗ್ರಹ೫ ಆತ್ಮಕಥೆ ಮತ್ತು ಜೀವನ ಚರಿತ್ರೆವಿಚಾರ ಸಾಹಿತ್ಯ೨೫ ಮಕ್ಕಳ ಸಾಹಿತ್ಯಪ್ರವಾಸ ಕಥನಕಿರಿಯರ ವಿಶ್ವಕೋಶಗೀತರೂಪಕ ಸೇರಿದಂತೆ ೧೫೦ಕ್ಕೂ ಹೆಚ್ಚು ಅಮೂಲ್ಯ ಕೃತಿಗಳನ್ನು ಕನ್ನಡಕ್ಕೆ ನೀಡಿದ್ದಾರೆ.
ಪ್ರಶಸ್ತಿ ಪಾರಿತೋಷಕ : ಈ ಮಹಾನ್ ಸಾಹಿತ್ಯ ಸಾಧಕನಿಗೆ ಜ್ಞಾನಪೀಠ ಪ್ರಶಸ್ತಿ (ಮೂಕಜ್ಜಿಯ ಕನಸು),ಪದ್ಮಭೂಷಣಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿಎರಡು ಗೌರವ ಡಾಕ್ಟರೇಟ್ತುಲಸಿ ಸಮ್ಮಾನ್ಇಂದಿರಾಗಾಂ ವೃಕ್ಷಮಿತ್ರ ಪ್ರಶಸ್ತಿಪಂಪ ಪ್ರಶಸ್ತಿಸ್ವೀಡಿಷ್ ಅಕಾಡಮಿ ಪಾರಿತೋಷಕವೇ ಮೊದಲಾದ ಹಲವು ಪ್ರಶಸ್ತಿಗಳು ಸಂದಿವೆ. ಕಾರಂತರು ಬದುಕಿದ್ದಿದ್ದರೆ ಈಹೊತ್ತು ಶತಾಯುಷಿಗಳಾಗಿರುತ್ತಿದ್ದರು. ಆದರೆತಮ್ಮ ೯೩ನೇ (೧೯೯೭) ವಯಸ್ಸಿನಲ್ಲಿ ಕಾರಂತರು ಇಹವನ್ನು ತ್ಯಜಿಸಿದರು.
                                                                                             ಕೃಪೆ   =>> ಟಿ.ಎಂ.ಸತೀಶ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು