ಸೇತುವೆ ಕಟ್ಟಲು ಎಷ್ಟು ದಿನ ಬೇಕಾಯ್ತು ?
ಭಾರತ-ಶ್ರೀಲಂಕಾ ನಡುವೆ ಇರುವ ರಾಮಸೇತು ಒಡೆಯಲು ಎರಡು ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದನ್ನು ಕಟ್ಟಲು ರಾಮನ ಕಪಿಸೈನ್ಯ ತೆಗೆದುಕೊಂಡಿದ್ದು ಕೇವಲ ಐದು ದಿನ! ಸೇತುವೆಯನ್ನು ಕಟ್ಟಿದ್ದು ಕಪಿಸೈನ್ಯ ಎಂಬುದು ಕೂಡ ಪೂರ್ತಿ ನಿಜವಲ್ಲ. ಅದನ್ನು ನಿರ್ಮಿಸಿದ್ದು ರಾಮನ ಅಂತಃಶಕ್ತಿ. ಇಲ್ಲವಾದರೆ, ಯಾರಾದರೂ ಮಂಗಗಳನ್ನಿಟ್ಟುಕೊಂಡು ಸಮುದ್ರಕ್ಕೆ ಸೇತುವೆ ಕಟ್ಟಲು ಸಾಧ್ಯವೇ? ವಾಲ್ಮೀಕಿಗೆ ರಾಮನನ್ನು ಪವಾಡಪುರುಷನನ್ನಾಗಿ ಮಾಡಲು ಇಷ್ಟವಿರಲಿಲ್ಲ. ಅವನನ್ನು ಒಳ್ಳೆಯ ಮನುಷ್ಯನನ್ನಾಗಿ ಮಾಡಿ (ಪುರುಷೋತ್ತಮ) ಜನರಿಗೆ ಆದರ್ಶವಾಗಿ ನೀಡಬೇಕು ಎಂಬುದು ಅವರ ಮನಸ್ಸಿನಲ್ಲಿತ್ತು. ಹಾಗಾಗಿ ಕಪಿಗಳ ನೆರವಿನಿಂದ ರಾಮ ಸೇತುವೆ ಕಟ್ಟಿದ ಎಂಬಂತೆ ಬಿಂಬಿಸಿದರು. ಕೃಪೆ : ಕೆ.ಟಿ.ಆರ್
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.