fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಆಗಸ್ಟ್ 14, 2014

ಮಳೆಗಾಲದ ಮದುಮಗಳು... ಅಬ್ಬೆ

ಬ್ರಹ್ಮಗಿರಿಯ ಶಿಖರವೇರಿದಾಗ ಕಾಣುವ ಆಕಾಶ, ಶುಭ್ರವಾಗಿರುವ ಬೆಟ್ಟದಪುರದ ನೋಟ ಮನೋಹರ
Kaveri
       ಕಾವೇರಿ... ಕೊಡಗಿನ ಕಾವೇರಿ..... ಕಾವೇರಿ ನೀ ಹರಿಯುವ ನದಿಯಲ್ಲ.. ಶೃಂಗಾರ ಲಹರಿ... ಎಂಬ ಕವಿಯ ಸಾಲುಗಳು ಅರ್ಥಪೂರ್ಣ. ಕರ್ನಾಟಕದ ಜೀವನದಿ ಕಾವೇರಿ ತಲಕಾವೇರಿಯಲ್ಲಿ ಹುಟ್ಟಿಬಂಗಾಳಕೊಲ್ಲಿಯನ್ನು ಸೇರುವ ತನಕ ಕಾವೇರಿಯ ಚೆಲುವು ಶೃಂಗಾರ ಲಹರಿಯೇ. ಅಬ್ಬಿಯ ಅಂದಕ್ಕೆ,ಬೃಂದಾವನದ ಚೆಲುವಿಗೆಶಿವನಸಮುದ್ರದ ಭರಚುಕ್ಕಿಗಗನಚುಕ್ಕಿಯ ಸಂಭ್ರಮಕ್ಕೆಹೊಗೆನಕಲ್ ಜಲಪಾತಕ್ಕೆ ಕಾರಣವಾಗುವ ಕಾವೇರಿಯ ಈ ಓಟದ ಬಗ್ಗೆ ಉದ್ಗ್ರಂಥವನ್ನೇ ಬರೆಯಬಹುದು.
    ಕಾವೇರಿ ಹುಟ್ಟುವುದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟಶ್ರೇಣಿಯಲ್ಲಿ. ಈ ಪವಿತ್ರ ಪುಣ್ಯಕ್ಷೇತ್ರಕ್ಕೆ ತಲಕಾವೇರಿ ಎಂಬ ನಾಮಧೇಯ. ಇಲ್ಲಿ ಅಗಸ್ತ್ಯೇಶ್ವರ ದೇವಾಲಯ,ಗಣಪತಿ ದೇವಾಲಯ ಇದೆ. ಅಗಸ್ತ್ಯ ಮಹಾಮುನಿಗಳು ಈ ಲಿಂಗವನ್ನು ಸ್ಥಾಪಿಸಿದರು ಎಂಬುದು ಪ್ರತೀತಿ. ತಲಕಾವೇರಿಯ ಈ ದೇಗುಲಗಳ ತಗ್ಗಿನಲ್ಲಿ ಕಾವೇರಿ ಉಗಮವಾಗುವ ಚಚ್ಚೌಕದ ಚಿಕ್ಕ ಕೊಳವಿದೆ. ಅದರ ಮುಂದೆ ಸ್ನಾನಘಟ್ಟ. ಇಲ್ಲಿಯೇ ಕಾವೇರಿ ಹುಟ್ಟುವುದು. ಈ ಸ್ಥಳಕ್ಕೆ ಕುಂಡಿಗೆ ಎನ್ನುತ್ತಾರೆ. ತುಲಾಸಂಕ್ರಮಣದ ನಿಶ್ಚಿತವಾದ ದಿನ ಇಲ್ಲಿ ಕಾವೇರಿ ತೀರ್ಥೋದ್ಭವವಾಗುತ್ತದೆ. ಪ್ರತಿ ವರ್ಷ ತುಲಾ ಮಾಸದ ಸಂಕ್ರಮಣದಿಂದ ವೃಶ್ಚಿಕ ಮಾಸದ ಸಂಕ್ರಮದವರೆಗೆ ಇಲ್ಲಿ ಕಾವೇರಿ ಜಾತ್ರೆ ನಡೆಯುತ್ತದೆ. ತಮಿಳುನಾಡುಕೇರಳಪಾಂಡಿಚೇರಿಕರ್ನಾಟಕದ ಹಾಸನಕೊಡಗುಮಂಡ್ಯ ಜಿಲ್ಲೆಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಕೊಳದಲ್ಲಿ ಮಿಂದು ಕುಂಡಿಗೆಯ ತೀರ್ಥ ಕುಡಿದುಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿ ತುಂಬಿಕೊಂಡು ಮನೆಗೆ ಹೋಗುತ್ತಾರೆ.


Talakaveri

       ಇದು ಪೌರಾಣಿಕ ಸ್ಥಳಜೀವ ನದಿ ಹುಟ್ಟುವ ಜನ್ಮಸ್ಥಳ ಹೀಗಾಗಿ ಇದು ಭಕ್ತರಿಗೆ ಪುಣ್ಯ ಕ್ಷೇತ್ರ. ಪ್ರವಾಸಿಗರಿಗೆ ರಮ್ಯಕ್ಷೇತ್ರ. ಶೀತ ಮಾರುತಗಳಿಂದಶೀತಹವೆಯಿಂದ ಕೂಡಿರುವ ಈ ಸ್ಥಳ ರಮಣೀಯ. ಬ್ರಹ್ಮಗಿರಿಯ ಶಿಖರವೇರಿದಾಗ ಕಾಣುವ ಆಕಾಶಶುಭ್ರವಾಗಿರುವ ಬೆಟ್ಟದಪುರದ ನೋಟ ಮನೋಹರ. ಇಲ್ಲಿ ನಿಂತು ನೋಡಿದರೆ,ಹಾವಿನಂತೆ ಹರಿಯುವ ನದಿಗಳನ್ನೂದೂರದಲ್ಲಿ ಅರಬ್ಬಿ ಸಮುದ್ರದ ರುದ್ರರಮಣೀಯ ಪ್ರಕೃತಿ ಸಿರಿಯನ್ನೂ ಕಣ್ತುಂಬಿಕೊಳ್ಳಬಹುದು. ಹತ್ತಿರದಲ್ಲೇ ಇರುವ ಅಬ್ಬಿ ಜಲಪಾತಕ್ಕೆ ಹೋಗಿ ಆನಂದಿಸಬಹುದು.
ಅಬ್ಬೆ ಜಲಪಾತ : ಕಾವೇರಿ ಜಲಾನಯನ ಪ್ರದೇಶಗಳಲ್ಲಿಭಾಗಮಂಡಲದ ಸುತ್ತ ಮುತ್ತ ಮಳೆ ಸುರಿಯುತ್ತಿದ್ದಾಗ ಕನ್ನಡ ನಾಡಿನ ಜೀವನದಿ ಕಾವೇರಿ ಉಕ್ಕಿ ಹರಿಯುತ್ತದೆ. ಕೊಡಗಿನ ರಮಣೀಯ ಹಸಿರು ರಾಶಿಯ ಮೇಲೆ ಮಳೆಯ ಹನಿಗಳು ಬೀಳುತ್ತಿದ್ದಂತೆಯೇ ಇಲ್ಲಿನ ವಿಖ್ಯಾತ ಜಲಪಾತ ಅಬ್ಬೆ ಮೈದುಂಬಿ ಧುಮ್ಮುಕ್ಕುತ್ತದೆ. ಹಾಲು ನೊರೆಯಂತೆ ಆಕರ್ಷಕವಾಗಿ ಧುಮ್ಮಿಕ್ಕುವ ಅಬ್ಬಿತನ್ನ ಪೂರ್ಣ ಸೊಬಗನ್ನು ಪಡೆವುದೇ ಮಳೆಗಾಲದಲ್ಲಿ. ಹೀಗಾಗೆ ಅಬ್ಬಿಗೆ ಮಳೆಗಾಲದ ಮದುಮಗಳು ಎಂಬ ಹೆಸರೂ ಇದೆ.

Abbe falls, Madikeri, Kannada, Kannadaratna.com

        ರಭಸದಿಂದ ಭೋರ್ಗರೆವ ಅಬ್ಬಿಯ ಆರ್ಭಟ ಮಳೆಗಾಲದಲ್ಲಿ ಅರ್ಧ ಕಿಲೋ ಮೀಟರ್ ದೂರ ಕೇಳುತ್ತದೆ. ಬಂಡೆಗಳ ಮೇಲಿಂದ ಧುಮ್ಮಿಕ್ಕುವ ಅಬ್ಬಿಯ ಜಲಪಾತ ಹಾಲು ನೊರೆಯಂತಹ ರಮಣೀಯ ದೃಶ್ಯದೊಂದಿಗೆ ಮತ್ತಷ್ಟು ಕಳೆಗಟ್ಟುತ್ತದೆ. ನೋಡುಗರಿಗೆ ಅಮಿತಾನಂದವನ್ನು ನೀಡುತ್ತದೆ.
    ಇಲ್ಲಿರುವ ತೂಗುಯ್ಯಾಲೆಯ ಮೇಲೆ ಮಳೆಯಲ್ಲಿ ತೋಯುತ್ತಾಅತ್ತಿಂದಿತ್ತ,ಇತ್ತಿಂದತ್ತ ಓಲಾಡುತ್ತಾ ಸಾಗಿದರೆಧುಮ್ಮಿಕ್ಕುವ ಭೋರ್ಗರೆಯುತ್ತಾ ಧುಮ್ಮಿಕ್ಕುವ ಅಬ್ಬಿಯ ಜಲಹನಿಗಳೂ ನಿಮಗೆ ಪನ್ನೀರ ಎರಚುತ್ತಾ ಸ್ವಾಗತ ಕೋರುತ್ತವೆ. ಬೇಸಿಗೆಯಲ್ಲಿ ಒಣಗಿ ತನ್ನ ಸೊಬಗನ್ನು ಕಳೆದುಕೊಳ್ಳುವ ಮನೋಹರವಾದ ಅಬ್ಬಿ ಜಲಪಾತದ ಸೊಬಗನ್ನು ಸವಿಯಲು ಮಳೆಗಾಲವೇ ಸೂಕ್ತ.
ಪ್ರವಾಸ ಮಾರ್ಗದರ್ಶಿ : ಬೆಂಗಳೂರಿನಿಂದ ೨೫೨ ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿಗೆ ರಾಜ್ಯದ ಎಲ್ಲ ಪ್ರಮುಖ ಪಟ್ಟಣಗಳಿಂದ ನೇರ ಬಸ್ ಸೌಲಭ್ಯ ಇದೆ. ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ಕೇವಲ 10 ಕಿಲೋ ಮೀಟರ್. ಮಡಿಕೇರಿಯಲ್ಲಿ ಮೊದಲು ಮಡಿಕೇರಿ ಕೋಟೆ ನೋಡಿಅಲ್ಲಿಂದ ಅಬ್ಬಿಗೆ ಬರಬಹುದು. ಮಡಿಕೇರಿಯಿಂದ ಭಾಗಮಂಡಲಕ್ಕೆ ೩೯ ಕಿ.ಮೀಟರ್. ಕಾವೇರಿಕನ್ನಿಕ ಹಾಗೂ ಸುಜ್ಯೋತಿ ನದಿಗಳು ಸೇರುವ ಈ ಸ್ಥಳದಲ್ಲಿ ಸುಂದರ ದೇವಾಲಯವಿದೆ. ಹತ್ತಿರದಲ್ಲೇ ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯೂ ಇದೆ. (ಮಡಿಕೇರಿಯಿಂದ ತಲಕಾವೇರಿಗೆ ೪೪ ಕಿ.ಮೀಟರ್). ಮಡಿಕೇರಿಯಿಂದ ನಿಸರ್ಗಧಾಮಕ್ಕೆ ೨೫ ಕಿ.ಮೀ ಹಾಗೂ ಹಾರಂಗಿ ಜಲಾಶಯಕ್ಕೆ ೩೬ ಕಿ.ಮೀ. ಮಾತ್ರ.
ಕೃಪೆ : ಟಿ.ಎಂ.ಸತೀಶ್.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು