fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಆಗಸ್ಟ್ 22, 2014

ತಾಯೆ ನಿನ್ನ ಕಂದನಾದೆನಲ್ಲ

ತಾಯೆ ನಿನ್ನ ಕಂದನಾದೆನಲ್ಲ ಎಂಥ ಪುಣ್ಯವೇ
ನಿನ್ನ ಅಮ್ಮನೆಂದು ಕರೆವ ಜೀವ ಏನು ಧನ್ಯವೇ


ನಿನ್ನ ಪಾದ ತೊಳೆಯಲು ಕಾತರಿಸಿದೆ ಕಡಲು
ಕೋಟಿ ಕೋಟಿ ಜೀವಕೆ ರಕ್ಷೆ ನಿನ್ನ ಒಡಲು
ಹಸಿರು ಮುರಿವ ಶಾಲಿವನದ ಸಾಲು ನಿನಗೆ ವಸ್ತ್ರ
ಅಂಬರದಲಿ ಮಿಂಚಿದೆ ನಿನ್ನ ಕೈಯ ಶಸ್ತ್ರ.


ರಾಮಕೃಷ್ಣರನ್ನು ತೊಡೆಯಲಾಡಿಸಿದಾ ಮಾತೆ
ವ್ಯಾಸ ಭಾಸ ಜನಕ ಕಾಳಿದಾಸ ಜನ್ಮದಾತೆ
ರಾಮಾಯಣ ಭಾರತ ನೀನಾಡಿದ ಮಾತು
ಬೆರಗಿನಿಂದ ಆಲಿಸಿದೆ ಲೋಕ ಅವಕೆ ಸೋತು.


ನಿನ್ನ ದಿವ್ಯರೂಪ ತೇಜ ಗಾಂಭೀರ್ಯದ ಭಾವ
ವಿಶ್ವದಲ್ಲೆ ಎಲ್ಲಿದೆ ಇಂಥ ಹಿರಿಯ ಜೀವ
ಪ್ರೀತಿ ಸಹನೆ ಸ್ನೇಹದಲ್ಲಿ ಯಾರು ನಿನಗೆ ಸಮವೆ?
ಅದಕೆ ಕರಗಿ ಗಂಗೆಯಾಯ್ತು ಕೈಲಾಸದ ಹಿಮವೆ.



                                                                           ಕೀಲಿಕರಣ: ಕಿಶೋರ್‍ ಚಂದ್ರ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು