fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ನವೆಂಬರ್ 26, 2014

ಅಂಗಸೋಂಕಿನ ಲಿಂಗತಂದೆ -1

ಶುಕ್ರವಾರ, ನವೆಂಬರ್ 14, 2014

ವಾಸ್ತುಶಿಲ್ಪದ ತವರು ಐಹೊಳೆ

ಬಾದಾಮಿ ಚಾಳುಕ್ಯರ ಕಾಲದಲ್ಲಿ ವೈಭವೋಪೇತವಾಗಿ ಮೆರೆದ ಐಹೊಳೆ
*ಟಿ.ಎಂ.ಸತೀಶ್
       ಭಾರತೀಯ ದೇವಾಲಯಗಳ ಪೈಕಿ ವಾಸ್ತು ಶಿಲ್ಪದ ತವರು ಎಂದೇ ಖ್ಯಾತವಾದ್ದು ಐಹೊಳೆ. ಬಾದಾಮಿ ಚಾಳುಕ್ಯರ ಕಾಲದಲ್ಲಿ ವೈಭವೋಪೇತವಾಗಿ ಮೆರೆದ ಈ ಗ್ರಾಮ ಇಂದು ವಿಶ್ವವಿಖ್ಯಾತವಾಗಲು ಇಲ್ಲಿನ ಕೋಟೆಯ ಒಳಗೆ ಹಾಗೂ ಹೊರಗೆ ಹರಡಿಕೊಂಡಿರುವ ಶಿಲ್ಪಕಲಾಶ್ರೀಮಂತಿಕೆಯ 125ಕ್ಕೂ ಹೆಚ್ಚು ಚಿಕ್ಕ ದೊಡ್ಡ ದೇವಾಲಯಗಳೇ ಕಾರಣ. ಹೀಗಾಗೆ ಈ ಊರನ್ನು ಹಿಂದೂ ದೇವಾಲಯಗಳ ವಾಸ್ತು ಶಿಲ್ಪದ ತೊಟ್ಟಿಲೆಂದೇ ಕರೆಯುತ್ತಾರೆ.
ಇತಿಹಾಸ
      ಮಲಪ್ರಭಾ ನದಿಯ ಬಲದಂಡೆಯ ಮೇಲೆ ಪ್ರಶಾಂತವಾಗಿ ಮಲಗಿರುವಂತೆ ತೋರುವ ನಿಸರ್ಗ ರಮಣೀಯ ತಾಣಕ್ಕೆ ಹಿಂದೆ ಅಯ್ಯೋಹೊಳೆ ಎಂದು ಹೆಸರಿತ್ತಂತೆ. ಅಯ್ಯ ಅಥವಾ ಅಯ್ಯನೋರು ಎಂದರೆ ಗುರುಗಳು, ಪಂಡಿತರು ಎಂದು ಅರ್ಥ. ಈ ಊರು ವಿದ್ಯಾಕೇಂದ್ರವಾಗಿ ಅಯ್ಯಗಳಿಂದ ತುಂಬಿದ್ದ ಕಾರಣ ಇದಕ್ಕೆ ಆ ಹೆಸರು ಬಂದಿತ್ತೆಂಬ ವಾದವಿದೆ. ಮತ್ತೊಂದು ಕಥೆಯ ರೀತ್ಯ ಕ್ಷತ್ರಿಯರ ರುಂಡ ಚೆಂಡಾಡಿದ ಪರಶುರಾಮ ಮಲಪ್ರಭೆಯ ಹೊಳೆಯಲ್ಲಿ ತನ್ನ ಪರಶುವನ್ನು ತೊಳೆದಾಗ ಇಡೀ ನದಿ ನೀರು ಕೆಂಪಾಯಿತು. ಮುಂಜಾನೆ ಈ ನೀರು ಕಂಡ ಮಹಿಳೆಯರು ಅಯ್ಯಯ್ಯೋ ಹೊಳೆ ಎಂದು ಉದ್ಗರಿಸಿದರು. ಹೀಗಾಗೆ ಈ ಊರು ಐಹೊಳೆಯಾಯ್ತು.
         ಐಹೊಳೆ ಅತ್ಯಂತ ಪ್ರಾಚೀನ ಗ್ರಾಮ. ಇಲ್ಲಿ ಕ್ರಿ.ಪೂ. 6-7ನೇನೇ ಶತಮಾನದಲ್ಲಿ ಅಂದರೆ ಕಬ್ಬಿಣದ ಯುಗದಲ್ಲೇ ಇಲ್ಲಿ ಜನವಸತಿ ಇತ್ತೆಂದು ಪ್ರಾಗೈತಿಹಾಸಿಕ ಸಂಶೋಧಕರು ಅಂದಾಜು ಮಾಡಿದ್ದಾರೆ. ಇಲ್ಲಿ ಉಸಗು ಕಲ್ಲಿನಿಂದ ಮತ್ತು ಕತ್ತರಿಸಿದ ಬಂಡೆಗಳನ್ನು ಗಾರೆ, ಮಣ್ಣಿನ ನೆರವಿಲ್ಲದೆ ಒಂದರ ಮೇಲೊಂದು ಇಟ್ಟು ನಿರ್ಮಿಸಿದ ಕೋಟೆಯಿದೆ. ಇದನ್ನು ಸುಮಾರು ಕ್ರಿ.ಶ. 6ನೇ ಶತಮಾನದಲ್ಲಿ ನಿರ್ಮಿಸಿರಬಹುದು ಎಂದು ಹೇಳಲಾಗಿದ್ದು ಕರ್ನಾಟಕದಲ್ಲಿ ಉಳಿದಿರುವ ಶಿಲಾಕೋಟೆಗಳ ಪೈಕಿ ಇದು ಅತ್ಯಂತ ಪ್ರಾಚೀನವಾದ್ದಾಗಿದೆ. ಕೋಟೆಯ ಸುತ್ತ ಕಂದಕ ಇರುವುದನ್ನು ಈಗಲೂ ಗುರುತಿಸಬಹುದಾಗಿದ್ದು, ಕೋಟೆಯ ಅವಶೇಷಗಳನ್ನು ಕಾಣಬಹುದು.
ವಾಸ್ತುಶಿಲ್ಪ
          ಐಹೊಳೆಯ ಕೋಟೆಯನ್ನು ಉತ್ತರ ರಸ್ತೆಯಿಂದ ಪ್ರವೇಶಿಸುತ್ತಿದ್ದಂತೆಯೇ ಕಾಣುವ ಕ್ರಿಸ್ತ ಶಕ 5ನೇ ಶತಮಾನದಲ್ಲಿ ನಿರ್ಮಿಸಲಾಗಿರುವ ಸುಂದರ ಹಾಗೂ ಮನಮೋಹಕ ಕೆತ್ತನೆಗಳಿಂದ ಕಂಗೊಳಿಸುವ ದುರ್ಗೆಯ ಮಂದಿರ ಮನಸೆಳೆಯುತ್ತದೆ.
           ದೇವಾಲಯದ ಮುಖಮಂಟಪದ ಭಿತ್ತಿಯ ಅಡ್ಡಪಟ್ಟಿಕೆಗಳಲ್ಲಿ ರಾಮಲಕ್ಷ್ಮಣ ಸೀತಾಮಾತೆಯನ್ನು ಗುಹ -ನಾವೆಯ ನೆರವಿನಿಂದ ನದಿ ದಾಟಿಸಿದ ಸುಂದರ ಉಬ್ಬುಶಿಲ್ಪವಿದೆ. ಪುರಾಣ, ಪುಣ್ಯಕಥೆಗಳ ಹಲವು ಕಥಾನಕಗಳು ಇಲ್ಲಿವೆ.
          ಐಹೊಳೆಯ ದೇವಾಲಯಗಳನ್ನು ಪುರಾತತ್ವ ಸರ್ವೇಕ್ಷಣ ಇಲಾಖೆ 22 ವಿಭಾಗಳಾಗಿ ವಿಂಗಡಿಸಿದೆ. ಇದರಲ್ಲಿ ಹುಚ್ಚಿಮಲ್ಲಿಗುಡಿ, ಲಡಖಾನ್ ಗುಡಿ, ಹುಚ್ಚಪ್ಪಯ್ಯಮಠ, ಗಳಗನಾಥ, ರಾವಲ್ ಪಹಡಿ, ಗುಹಾಂತರ ದೇವಾಲಯ, ಜೈನರ ಮೇಗುತಿ ದೇವಾಲಯ, ಎರಡು ಅಂತಸ್ತಿನ ಜೈನ ದೇವಾಲಯ ಪ್ರಮುಖ ಆಕರ್ಷಣೆ.
ಬೆಂಗಳೂರಿನಿಂದ 460, ಬಿಜಾಪುರದಿಂದ 110 ಹಾಗೂ ಬಾದಾಮಿಯಿಂದ 40 ಕಿ.ಮೀಟರ್ ದೂರದಲ್ಲಿರುವ ಈ ಸುಂದರ ತಾಣ ಕರುನಾಡ ಕಲಾಶ್ರೀಮಂತಿಕೆಗೆ ಸಾಕ್ಷಿಯಾಗಿದೆ. 

ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು. ದೂರವಾಣಿ :080-2352901 /2352909 /2352903 Email : kstdc@vsnl.in

ಸೋಮವಾರ, ನವೆಂಬರ್ 10, 2014

ನುಡಿ ಮುತ್ತುಗಳು 17

  • ಲಕ್ಶ್ಮಿ ಇರುವಲ್ಲಿ ಆಪತ್ತುಗಳು ಬಾಗಿಲು ತೆರೆದಿಟ್ಟಂತೆ ಧುಮ್ಮಿಕ್ಕುತ್ತವೆ.

  • ಎನಿತು ಜನ್ಮದಲಿ, ಎನಿತು ಜೀವರಿಗೆ, ಎನಿತು ನಾವು ಋಣಿಯೋ? ತಿಳಿದು ನೋಡಿದರೆ ಬಾಳು ಎಂಬುದಿದು ಋಣದ ರತ್ನಗಣಿಯೋ!

  • ನಿಮ್ಮ ಪ್ರೀತಿಯನ್ನು ಮೆಚ್ಚುಗೆಯನ್ನು ನಿಮ್ಮವರಿಗೆ ಇಂದೇ ಹೇಳಿ. ನಾಳೆಗೆ ಈ ಅವಕಾಶ ಸಿಗದೇ ಇರಬಹುದು.

  • ತನ್ನ ಸುಖದಲ್ಲಿ ಹರ್ಷಗೊಳ್ಳದೆ, ಇತರರ ದುಃಖದಲ್ಲಿ ಹರ್ಷಗೊಳ್ಳದೆ, ಕೊಟ್ಟು ಸಂಕಟಪಡದೇ ಇರುವವನೇ ಸಜ್ಜನ.

  • ಎಷ್ಟೋ ಬಾರಿ ಗೆಲವು ಸೋಲಿನ ರೂಪದಲ್ಲಿ ಬರುತ್ತದೆ....

ಶನಿವಾರ, ನವೆಂಬರ್ 08, 2014

ಭಾನುವಾರ, ನವೆಂಬರ್ 02, 2014

ನವೆಂಬರ ಜ್ಞಾನ 5


೧. ಕರ್ನಾಟಕದಲ್ಲಿ ರೈಲು ಸಂಪರ್ಕವಿಲ್ಲದ ಜಿಲ್ಲೆ ಯಾವುದು?

೨. ಕನ್ನಡದಲ್ಲಿ ಭಾವಗೀತೆ ಎಂಬ ಮಹಾಪ್ರಬಂಧ ಬರೆದು ಕನ್ನಡದ ಪ್ರಪ್ರಥಮ ಪಿ.ಎಚ್.ಡಿ ಪದವಿ ಪಡೆದ ಹಿರಿಮೆಗೆ ಪಾತ್ರರಾಗಿರುವವರು ಯಾರು?

೩. ಕರ್ನಾಟಕದ ಉದ್ದವಾದ ನದಿ ಯಾವುದು?

೪. ಕರ್ನಾಟಕದಲ್ಲಿ ದೊಡ್ಡ ಆಲದ ಮರವಿರುವ ಊರು ಯಾವುದು?

೫. ಕನ್ನಡದಲ್ಲಿ ಅತೀ ಹೆಚ್ಚು ಪತ್ತೆದಾರಿ ಕಾದಂಬರಿಗಳನ್ನು ಬರೆದವರು ಯಾರು?

೬. ಭಾರತದ ಮೊದಲ ಆಕಾಶವಾಣಿ ಕೇಂದ್ರವು ಯಾವ ವರ್ಷ ಮತ್ತು ಯಾವ ಊರಿನಲ್ಲಿ ಸ್ಥಾಪಿಸಲಾಯಿತು?

೭. ರೈಡರ್ ಕಫ್ ಯಾವ ಕ್ರೀಡೆಗೆ ಸಂಬಂಧಿಸಿದುದಾಗಿದೆ?

೮. ರನ್ನ ಮಹಾಕವಿ ಬರೆದ ಗಧಾಯುದ್ಧಕ್ಕೆ ಇರುವ ಇನ್ನೊಂದು ಹೆಸರು ಏನು?

೯. ಜಿ.ಎಸ್.ಶಿವರುದ್ರಪ್ಪನವರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬಂದಿದೆ?

೧೦. ಸಂಸ್ಕಾರ ಕಾದಂಬರಿ ಬರೆದರು ಯಾರು?

೧೧. ಕರ್ನಾಟಕದಲ್ಲಿ ಅತಿ ಹೆಚ್ಚು ಅರಣ್ಯ ಹೊಂದಿರುವ ಜಿಲ್ಲೆ ಯಾವುದು?

೧೨. ಕನ್ನಡದ ಮೊದಲ ಟೆಲಿಚಿತ್ರ  ಯಾವುದು?ಮತ್ತು ನಿದೇರ್ಶಕರು ಯಾರು?

೧೩. ಕರ್ನಾಟಕದ ಭತ್ತದ ಕಣಜವೆಂದು ಹೆಸರಾಗಿರುವ ಜಿಲ್ಲೆ ಯಾವುದು?

೧೪. ಕರ್ನಾಟಕದ ಮೊದಲ ರೈಲು ಮಾರ್ಗ ಯಾವುದು?

೧೫. ಕೃಷ್ಣದೇವರಾಯ ರಚಿಸಿದ ಎರಡು ಕೃತಿಗಳು ಯಾವುವು?

೧೬. ಗಾಂಧೀಜಿಯವರು ತಂಗಿದ್ದ ಕರ್ನಾಟಕದ ಗಿರಿಧಾಮ ಯಾವುದು?

೧೭. ವಿದೇಶಿ ಚಲನಚಿತ್ರೋತ್ಸವದಲ್ಲಿ ಪ್ರಥಮ ಬಾರಿಗೆ ಪ್ರದರ್ಶನಗೊಂಡ ಕನ್ನಡ ಚಿತ್ರ ಯಾವುದು?

೧೮. ಯುದ್ಧದಲ್ಲಿ ಮೊದಲು ಕ್ಷಿಪಣಿ ಪ್ರಯೋಗ ಮಾಡಿದ ಕನ್ನಡಿಗ ಯಾರು?

೧೯. ಕರ್ನಾಟಕದ ಕುಲಪುರೋಹಿತ ಎಂದು ಯಾರನ್ನ ಕರೆಯಲಾಗಿದೆ?

೨೦. ಕರ್ನಾಟಕದಲ್ಲಿ ಮೊಟ್ಟ ಮೊದಲು ಸಿಮೆಂಟ್ ಕಾರ್ಖಾನೆ ಸ್ಥಾಪನೆಯಾಗಿದ್ದು ಎಲ್ಲಿ?

೨೧. ಧರ್ಮಸ್ಥಳದಲ್ಲಿರುವ ಏಕಶಿಲಾ ಬಾಹುಬಲಿ ವಿಗ್ರಹದ ಎತ್ತರವೆಷ್ಟು?

೨೨. ತುಂಗಭದ್ರಾ ಯಾವ ನದಿಗೆ ಉಪನದಿ?

೨೩. ಕರ್ನಾಟಕದಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು?

೨೪. ಮಾನವನ ರಕ್ತದೊತ್ತಡದ ಸಾಮಾನ್ಯ ವ್ಯಾಪ್ತಿ ಎಷ್ಟು?

೨೫. ಭಾರತೀಯ ವಿಜ್ಞಾನಿ ಸಂಸ್ಥೆ ಯಾವ ಊರಿನಲ್ಲಿದೆ?

೨೬. ಕೆಳದಿ ಇತಿಹಾಸ ಪ್ರಸಿದ್ಧ ಇದು ಯಾವ ಜಿಲ್ಲೆಯಲ್ಲಿದೆ?

೨೭. ಗುಬ್ಬಿವೀರಣ್ಣ ಪ್ರಶಸ್ತಿ ಪಡೆದ ಉತ್ತರ ಕರ್ನಾಟಕದ ನಟ ಯಾರು?

೨೮. ಟೇಬಲ್ ಟೆನ್ನಿಸ್‌ಗೆ ಹೆಸರಾಗಿರುವ ಕನ್ನಡತಿ ಯಾರು?

೨೯. ರಾಷ್ಟ್ರೀಯ ಕಾಫಿ ಸಂಶೋಧನಾ ಕೇಂದ್ರರ ಯಾವ ಊರಿನಲ್ಲಿದೆ?

೩೦. ಈ ಭಾವಚಿತ್ರದಲ್ಲಿರುವವರು ಗುರುತಿಸಿ.
                                                                                     ಉತ್ತರಗಳು:

ಶನಿವಾರ, ನವೆಂಬರ್ 01, 2014

ಟಾಪ್ - 3 ಅಕ್ಟೋಬರ್- 2014


 ನನ್ನ ಜಾಲತಾಣ ಅತೀ ಹೆಚ್ಚು ವೀಕ್ಷಣೆಗಳು ( ಟಾಪ್ - 3 ) ಅಕ್ಟೋಬರ್- 2014
ಪ್ರಕಟನೆಗಳ ವೀಕ್ಷಣೆ ಟಾಪ್ 3 
ಅಕ್ಕಮ್ಮ -1
  ರಾಷ್ಟ್ರಗಳ ಪ್ರಕಾರ ವೀಕ್ಷಣೆ ಟಾಪ್ 3
ಭಾತರ
ಅಮೇರಿಕಾ ಸಂಯುಕ್ತ ಸಂಸ್ಥಾನ
ಫ್ರಾನ್ಸ್

ಬ್ರೌಸರ್ಗಳ ಪ್ರಕಾರ ವೀಕ್ಷಣೆ ಟಾಪ್ 

 Firefox

Crome

Internet Explore


ಆಪರೇಟಿಂಗ್ ಸಿಸ್ಟಮ್ಗಳ ವೀಕ್ಷಣೆ ಟಾಪ್ 3 

Windows 

Android 

Macintosh


ಆಪರೇಟಿಂಗ್ ಸಿಸ್ಟಮ್ಗಳ ವರ್ಷನಗಳ ಪ್ರಕಾರ

                                            Windows XP
                                            Windows 7
                                          Nokia Phones
 ಕಳೆದ ತಿಂಗಳಲ್ಲಿ ಪುಟಗಳ ವೀಕ್ಷಣೆ
1577

ಕನ್ನಡ ರಾಜ್ಯೋತ್ಸವ