fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಮೇ 26, 2015

ಅನುಗಲೇಶ್ವರ + ಅಪ್ಪಿದೇವಯ್ಯ

ಅಂಕಿತ ನಾಮ: ಅನುಗಲೇಶ್ವರ

ಕಾಲ:

ದೊರಕಿರುವ ವಚನಗಳು: 1 (ಆಧಾರ: ಸಮಗ್ರ ವಚನ ಸಂಪುಟ)

ತಂದೆ/ತಾಯಿ:

ಹುಟ್ಟಿದ ಸ್ಥಳ:

ಪರಿಚಯ: 

ಅಪ್ಪಿದೇವಯ್ಯ


 ಎಲೆ ದೇವಾ ಏತಕ್ಕೆ ನುಡಿಯೆ? ಎನ್ನೊಳು ಮುನಿಸೆ?
ಎನ್ನೊಳು ನಿನ್ನಯ ಚಿತ್ತವನಿರಿಸಿ ನೀಕರಿಸಿ ನುಡಿಯದಿರ್ದಡೆ
ಎನ್ನಯ ನೋವನಿನ್ನಾರಿಗೆ ಹೇಳುವೆ, ನಿನಗಲ್ಲದೆ?
ನೀ ಮಾಡುವ ಮಾಟ ಅನೇಕ ಕುಟಿಲ.
ಯೋಗಿಗಳ ಸುತ್ತಿ ಮುತ್ತಿದ ಹರಿತದ ಪಾಶ ನಿಮ್ಮಲ್ಲಿ.
ಅನೇಕರ ಕೊಲುವ ಪಾಶ ಕೈಯಲ್ಲಿ, ಭವವೇಷವಂಗದಲ್ಲಿ.
ಭಕ್ತರ ಕೊಲುವ ದೋಷಕ್ಕೆ ಅಂಜಿದೆಯಾಗಿ, ನಿನಗದು ನೀತಿಯೆ?
ರುದ್ರನ ವೇಷಕ್ಕದು ಸಹಜ, ಅವ ಬಿಡು ಬಿಡು ನೀಕರಿಸು.
ಉಮಾಪತಿ ವೇಷವ ಬಿಟ್ಟು ಸ್ವಯಂಭುವಾಗು.
ಎಲೆ ಅಯ್ಯಾ, ಎನ್ನಲ್ಲಿ ಸದ್ಭಕ್ತಿಯ ನೆಲೆಗೊಳಿಸಿ,
ಎನ್ನ ಪ್ರಕೃತಿಯ ಪರಿಹರಿಸಯ್ಯಾ.
ಎನ್ನ ತಂದೆ, ಮುಕುರ ಪ್ರತಿಬಿಂಬದಂತೆ
ಎನಗೆ ನಿನಗೆಂಬುದ ನೀನರಿಯಾ?
ಎಲೆ ದೇವಾ, ಅರಿದರಿದೇಕೆನಗೆ ಕೃಪೆಯಾಗಲೊಲ್ಲೆ.
ಎಲೆ ಸ್ವಾಮಿ, ಆನು ಮಾಡಿದುದೇನು ನಿನಗೆ?
ಮಾರನ ಕೊಂದ ಮಲತ್ರಯದೂರನೆ,
ಅನಾಗತಸಂಸಿದ್ಧ ಭೋಗಮಯನೆ,
ನಯನ ಚರಣಾರವಿಂದ ವಿರಾಜಿತನೆ, ಸರ್ವವ್ಯಾಪಕ ನಾಶನೆ,
ಸರ್ವಾಂತರ್ಗತ ವಿಮಲಾಂತರಂಗನೆ, ಕರುಣಾಬ್ಧಿಚಂದ್ರ ವಿಲಾಸಿತನೆ,
ಭಕ್ತ ಚಿತ್ತದ ಸಾಕಾರದ ಪುಂಜನೆ,
ಭಕ್ತವತ್ಸಲನೆ, ಭಕ್ತದೇಹಿಕದೇವನೆ,
ಎನಗೆ ನಿಮ್ಮ ಭಕ್ತಿವಿಲಾಸವ ಕರುಣಿಸಯ್ಯಾ.
ಶಂಭು ಮಾರೇಶ್ವರಾ.
 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು