fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾನುವಾರ, ಜೂನ್ 14, 2015

ಬಿಳಿಗಿರಿರಂಗನ ಬೆಟ್ಟ

ಸುಂದರ ಗಿರಿಧಾಮ :ಬಿಳಿಗಿರಿರಂಗನ ಬೆಟ್ಟ
ಶಿವ
, ವಿಷ್ಣು ನೆಲೆಸಿಹ ಹರಿಹರ ಕ್ಷೇತ್ರ
ಟಿ.ವಿ.ಯಲ್ಲಿ ಪುಟ್ಟಣ್ಣ ಕಣಗಾಲ್ ನಿದೇಶನದ ಶರಪಂಜರ ಚಿತ್ರದ ಬಿಳಿಗಿರಿ ರಂಗಯ್ಯ....’ ಗೀತೆಗೆ ಮಿನುಗುತಾರೆ ಕಲ್ಪನಾ ನರ್ತಿಸುವುದನ್ನು ನೋಡುವಾಗ ಹಿನ್ನೆಲೆಯಲ್ಲಿ ಕಾಣುವ ಪ್ರಕೃತಿ ಸಿರಿ ನಿಮ್ಮನ್ನು ಆಕರ್ಷಿಸಿದ್ದರೆ ಅಚ್ಚರಿ ಇಲ್ಲ. ಯಾವುದೀ ರಮ್ಯತಾಣ ಎಂಬ ಪ್ರಶ್ನೆ ನಿಮ್ಮ ಮನದಲ್ಲಿ ಮೂಡಿದ್ದರೂ ಆಶ್ಚರ್ಯವೇನಿಲ್ಲ. ಇದು ವನ್ಯಮೃಗಗಳ ಬೀಡು, ಶ್ರೀರಂಗನಾಥನ ನೆಲೆವೀಡು ಬಿಳಿಗಿರಿ ರಂಗನ ಬೆಟ್ಟ.
ಮೈಸೂರಿನಿಂದ ೧೨೦ ಕಿ.ಮೀಟರ್ ಹಾಗೂ ಬೆಂಗಳೂರಿನಿಂದ ೨೪೦ ಕಿ.ಮೀಟರ್ ದೂರದಲ್ಲಿರುವ ಬಿಳಿಗಿರಿ ರಂಗನ ಬೆಟ್ಟ , ಸಮುದ್ರ ಮಟ್ಟದಿಂದ ೧೫೫೨ ಮೀಟರ್ ಎತ್ತರದಲ್ಲಿರುವ ಸುಂದರ ಗಿರಿಧಾಮ. ೧೬ ಕಿ.ಮೀ.ನಷ್ಟು ಉದ್ದದವರೆಗೆ ಹಬ್ಬಿರುವ ಗಿರಿಶ್ರೇಣಿಯ ನೋಟವೇ ಸುಂದರ. ಇನ್ನು ಇಡೀ ಭೂಭಾಗವೇ ನೈಸರ್ಗಿಕ ಕಾನನಗಳಿಂದ ಕೂಡಿದ್ದು ಆನೆ, ಹುಲಿ, ಚಿರತೆ, ಕಾಡೆಮ್ಮೆ, ಕರಡಿ, ಜಿಂಕೆ, ತೋಳ, ನರಿ ಮೊದಲಾದ ನೂರಾರು ಬಗೆಯ ವನ್ಯಮೃಗಗಳಿಗೆ ಆಶ್ರಯತಾಣವಾಗಿದೆ.
೫೪೦ ಚದರ ಕಿ.ಮೀ.ನಷ್ಟಿರುವ ದಟ್ಟಡವಿ ಹುಲ್ಲು, ಕುರುಚಲುಗಿಡ, ಪೊದೆ ಹಾಗೂ ಬೀಟೆ, ಹೊನ್ನೆ, ಮತ್ತಿ, ತೇಗ, ಶ್ರೀಗಂಧವೇ ಮೊದಲಾದ ಎತ್ತರದ ಮರಗಳಿಂದ ಕೂಡಿದೆ. ನಿರ್ಮಲವಾಗಿ ಹರಿವ ಕಾವೇರಿ ನದಿ ಮೃಗಪಕ್ಷಿಗಳಿಗಷ್ಟೇ ಅಲ್ಲ ಬೆಟ್ಟದ ಮೇಲಿರುವ ಊರಿನ ಜನರಿಗೂ ಜಲಾಶ್ರಯವಾಗಿದೆ.
ಐತಿಹ್ಯ: ಯಳಂದೂರಿನಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಈ ತಾಣದಲ್ಲಿ ಬಿಳಿಯ ಬಣ್ಣದ ಶಿಲೆಗಳಿರುವ ಕಾರಣ ಇದನ್ನು ಬಿಳಿಕಲ್ಲಬೆಟ್ಟ, ಶ್ವೇತಾದ್ರಿ ಎಂದೂ ಕರೆಯುತ್ತಿದ್ದರು. ಬ್ರಹ್ಮಾಂಡ ಪುರಾಣದಲ್ಲಿ ಈ ಬೆಟ್ಟವನ್ನು ದಕ್ಷಿಣ ತಿರುಪತಿ ಎಂದು ಉಲ್ಲೇಖಿಸಲಾಗಿದೆ. ನಿಸರ್ಗರಮಣೀಯವಾದ ಈ ತಾಣದಲ್ಲಿ ನವರಂಗ, ಮುಖಮಂಟಪದಿಂದ ಕೂಡಿದ ಬಿಳಿಗಿರಿರಂಗನ ಪುರಾತನ ದ್ರಾವಿಡಶೈಲಿಯ ದೇವಾಲಯವಿದೆ. ಇಲ್ಲಿನ ಮೂಲ ದೇವರನ್ನು ಬ್ರಹ್ಮರ್ಷಿಗಳಾದ ವಾಸಿಷ್ಟರೇ ಪ್ರತಿಷ್ಠಾಪಿಸಿದರು ಎಂದು ಸ್ಥಳಪುರಾಣ ಸಾರುತ್ತದೆ. ಹನುಮಂತ ಮಣವಾಳ ಮಹಾಮುನಿಯ ಮೂರ್ತಿ, ರಾಮಾನುಜಾಚಾರ್ಯ, ವೇದಾಂತಾಚಾರ್ಯರ ಮೂರ್ತಿಯೂ ಇಲ್ಲಿದೆ. ಪಿತೃವಾಕ್ಯ ಪರಿಪಾಲನೆಗಾಗಿ ತಾಯಿ ರೇಣುಕಾಮಾತೆಯ ಶಿರವನ್ನು ತನ್ನ ಪರಶುವಿನಿಂದ ಚಂಡಾಡಿದ ಪರಶುರಾಮ ಮಾತೃ ಹತ್ಯಾ ದೋಷ ಪರಿಹಾರಕ್ಕಾಗಿ ಈ ಗಿರಿಯಲ್ಲಿ ತಪವನ್ನಾಚರಿಸಿ ವಿರಜಾ ನದಿಯ ಜಲದಿಂದ ಭಗವಂತನ ಪಾದತೊಳೆದನೆಂದೂ ಸ್ಥಳಪುರಾಣ ಹೇಳುತ್ತದೆ. ಹೀಗಾಗೇ ದೇವಾಲಯದಿಂದ ೧೬ ಕಿ.ಮೀ. ದೂರದಲ್ಲಿರುವ ವಿರಜಾ ನದಿಗೆ ಭಾರ್ಗವಿ ನದಿ ಎಂದು ಹೆಸರು ಬಂದಿದೆ. ಬೆಟ್ಟದ ಮೇಲೆ ಗಂಗಾಧರೇಶ್ವರನ ದೇಗುಲವೂ ಇದೆ. ಅಸುರರನ್ನು ಭಸ್ಮಮಾಡಿದ ಶಿವ ಇಲ್ಲಿ ಗಂಗಾಧರನಾಗಿ ನೆಲೆ ನಿಂತ ಎನ್ನುತ್ತದೆ ಐತಿಹ್ಯ. ಶಿವ ಹಾಗೂ ನಾರಾಯಣರು ನೆಲೆಸಿಹ ಈ ತಾಣ ಹರಿಹರ ಕ್ಷೇತ್ರವೆಂದೂ ಪ್ರಖ್ಯಾತವಾಗಿದೆ.
 ರಮ್ಯತಾಣ: ಈ ಊರಿನಿಂದ ೧೯ ಕಿ.ಮೀ. ದೂರದಲ್ಲಿ ಶಿವನಸಮುದ್ರದ ಗಂಗರಾಜ ಕಂಚು ಕೋಟೆ ನಿರ್ಮಿಸಿದ್ದನೆನ್ನುತ್ತದೆ ಇತಿಹಾಸ. ಈಗಲೂ ಕೋಟೆಯ ಅವಶೇಷಗಳು ಇದಕ್ಕೆ ಮೂಕಸಾಕ್ಷಿಯಾಗಿ ನಿಂತಿವೆ. ಇಲ್ಲಿನ ಬಿಳಿಕಲ್ಲು ತಿರು ವೆಂಕಟನಾಥನಿಗೆ ಹದಿನಾಡಿನ ಮುದ್ದರಾಜ ೧೬೬೭ರಲ್ಲಿ ದತ್ತಿ ಬಿಟ್ಟನೆಂದು ತಾಮ್ರಶಾಸನ ಸಾರುತ್ತದೆ. ದಿವಾನ್ ಪೂರ್ಣಯ್ಯನವರು ದೇವಾಲಯದ ಸೇವೆಗಾಗಿ ಎರಡು ಗ್ರಾಮಗಳನ್ನೇ ದತ್ತಿಯಾಗಿ ಕೊಟ್ಟಿದ್ದರು.
ಹವಾಮಾನ : ಹಸಿರು ಸಿರಿಯ ನಡುವೆ ಮೈದಳೆದು ನಿಂತಿರುವ ಈ ಪ್ರಕೃತಿರಮಣೀಯ ತಾಣದ ಹವಾಮಾನ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ. ಇಲ್ಲಿನ ತಂಪಾದ ಹವೆಯ ಆಹ್ಲಾದವೇ ಬೇರೆ. ಸುಡು ಬೇಸಿಗೆಯಲ್ಲೂ ಬಿಳಿಗಿರಿರಂಗನ ಬೆಟ್ಟ ಹವಾನಿಯಂತ್ರಿತ ಪಟ್ಟಣದಂತೆ ಭಾಸವಾಗುತ್ತದೆ.
ವಾಹನ ಸೌಕರ್ಯ : ಬೆಂಗಳೂರು, ಮೈಸೂರು, ಚಾಮರಾಜನಗರ, ಯಳಂದೂರಿನಿಂದ ನೇರ ಬಸ್ ಸೌಲಭ್ಯ ಇದೆ. ಪ್ರವಾಸಿ ಮಂದಿರ, ಗುಡಿ ಕ್ಯಾಂಪ್‌ನಲ್ಲಿ ವಾಸ್ತವ್ಯಕ್ಕೆ ಅವಕಾಶವಿದೆ. ಈ ಬೆಟ್ಟದಲ್ಲಿ ಕಾಡಾನೆ, ಕರಡಿಗಳ ಕಾಟವಿದೆ ರಾತ್ರಿಯ ಪ್ರಯಾಣ ಮಾಡದಿರುವುದು ಉತ್ತಮ.  
ಸಂಪರ್ಕ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಖನಿಜ ಭವನ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು. 
ದೂರವಾಣಿ :080-2352901 /2352909 /2352903 Email : kstdc@vsnl.in      
*ಟಿ.ಎಂ. ಸತೀಶ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು