ಕಾವೇರಿಯ ಮುಖ್ಯ ಉಪನದಿಗಳಲ್ಲೊಂದು. ನಂದಿದುರ್ಗದಲ್ಲಿ ಹುಟ್ಟಿ ಬೆಂಗಳೂರು ಜಿಲ್ಲೆಯಲ್ಲಿ ಉತ್ತರದಿಂದ ದಕ್ಷಿಣಕ್ಕೆ ಹರಿಯುತ್ತದೆ. 161 ಕಿಮೀ ಉದ್ದವಿದೆ. ಜಲಾನಯನ ಪ್ರದೇಶ 4,359 ಚ.ಕಿಮೀ. ನೆಲಮಂಗಲದ ದಕ್ಷಿಣದ ಕಡೆಯಿಂದ ಬರುವ ಕುಮುದ್ವತಿ, ಬೆಂಗಳೂರಿನ ಕಡೆಯಿಂದ ಬರುವ ವೃಷಭಾವತಿಗಳು ಇದರ ಉಪನದಿಗಳು. ಸಾವನದುರ್ಗ, ರಾಮಗಿರಿ, ಶಿವಗಿರಿ ಮೊದಲಾದ ಬೆಟ್ಟಗುಡ್ಡ ಪ್ರದೇಶ ಮತ್ತು ಸಾಧಾರಣ ಕಾಡುಪ್ರದೇಶಗಳ ಮೂಲಕ ದಕ್ಷಿಣಕ್ಕೆ ಹರಿಯುವುದರಿಂದ ನೀರಾವರಿಗೆ ಹೆಚ್ಚು ಪ್ರಯೋಜನಕಾರಿಯಾಗಿಲ್ಲ. ಆದರೂ ಮೇಲ್ಕಣಿವೆಯಲ್ಲಿ ಹೆಸರುಘಟ್ಟ ಮೊದಲಾದ ದೊಡ್ಡ ಕೆರೆಗಳಿಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ದೊಡ್ಡಬಳ್ಳಾಪುರ, ಕಾಕೋಳು ಮುಂತಾದ ಕೆರೆಗಳಿಗೂ ನೀರನ್ನೊದಗಿಸುತ್ತದೆ. ಮುಂದುವರಿದು ನೆಲಮಂಗಲ, ಮಾಗಡಿ, ರಾಮನಗರ ಮತ್ತು ಕನಕಪುರ ತಾಲ್ಲೂಕುಗಳ ಮೂಲಕ ಹರಿದು ಕನಕಪುರದ ಹತ್ತಿರ ಕಾವೇರಿವನ್ನು ಸಂಗಮದ ಬಳಿ ಸೇರುತ್ತದೆ. ಮಳೆ ಕಡಿಮೆ ಬೀಳುವ ಪ್ರದೇಶದಲ್ಲಿರುವುದ ರಿಂದ ಬೇಸಗೆಯಲ್ಲಿ ಬಹುಮಟ್ಟಿಗೆ ಇದರ ಪಾತ್ರ ಒಣ ಮರಳಿನಿಂದ ತುಂಬಿರುತ್ತದೆ. ಆದರೂ ಸಂಪೂರ್ಣವಾಗಿ ಬತ್ತಿಹೋಗದೆ ನೀರು ಸಣ್ಣ ಪ್ರಮಾಣದಲ್ಲಿ ಹರಿಯುತ್ತಿರುತ್ತದೆ. ಮಳೆಗಾಲದಲ್ಲಿ ಅನೇಕ ಉಪನದಿಗಳ ನೀರು ಒದಗುವುದರಿಂದ ತುಂಬಿ ಹರಿಯುತ್ತದೆ. ಒಮ್ಮೊಮ್ಮೆ ಪ್ರವಾಹಗಳೂ ಕಾಣಿಸಿಕೊಳ್ಳುತ್ತವೆ. ಪ್ರವಾಹದ ಚಲನೆ 3500 ರಿಂದ 5000 ಕ್ಯೂಸೆಕ್ಸ್ ವರೆಗಿರುವುದು. ನೆಲಮಂಗಲ, ಮಾಗಡಿ ಮತ್ತು ರಾಮನಗರಗಳಿಂದ ಬೆಂಗಳೂರಿಗೆ ಹೋಗುವ ಮಾರ್ಗಗಳಲ್ಲಿ ನದಿಗೆ ಅಡ್ಡಲಾಗಿ ದೊಡ್ಡ ಸೇತುವೆಗಳನ್ನು ನಿರ್ಮಿಸಿದ್ದಾರೆ. ನದಿಯ ನೀರನ್ನು ನೀರಾವರಿಗೆ ಉಪಯೋಗಿಸಿಕೊಳ್ಳಲು ಯೋಜನಾರೂಪವಾದ ಪ್ರಯತ್ನ ನಡೆಯುತ್ತಿದೆ.
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಗುರುವಾರ, ಅಕ್ಟೋಬರ್ 01, 2015
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ನಾಮಕರಣಕ್ಕೆ "ಡ" ಕಾರದ ಹೆಣ್ಣಿನ ಹೆಸರುಗಳಿದ್ದರೆ ಹೇಳಿ... ಬೇಗ ಹೇಳಿ…. ನಿಮ್ಮ ಉತ್ತರ ಈ ತಾಣಕ್ಕೆ ಕಮೆಂಟ್ ಅಥವಾ 8951734903 ಗೆ ಸಂದೇಶ / ವಾ...
-
೧ ಬಾಲ್ಯ ಜೀವನ ೨ ಡಾ. ವಿಷ್ಣುವರ್ಧನ್ ಅಭಿನಯದ ಸಂಪೂಣ೯ ಚಿತ್ರಗಳು ೨.೧ ಕನ್ನಡ ೨.೨ ಹಿಂದಿ ೨.೩ ತಮಿಳು ೨.೪ ತೆಲುಗು ೨.೫ ಮಲಯಾಳಂ ಬಾಲ್ಯ ...
ಪದ ಪುಸ್ತಕ
ಹುಡುಕಾಟ ಫಲಿತಾಂಶಗಳು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.