ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಮೇ 22, 2016

ಅಪ್ಪಾ ನಿನ್ನ ಬರುವಿಕೆಯಲ್ಲಿ



ಅರಿತವರು ಹೇಳಿದರು  ಅರಿಯದವರು ಸುಮ್ಮನಾದರು  ಭವಿಷ್ಯಕ್ಕೆ ತಂದೆಯೇ ಶಿಲ್ಪಿ  ನೂರು ಕನಸಿಗೆ ನೀ ಆಧಾರ  ಪುಟ್ಟ ಪುಟ್ಟ ಕನಸ ಬೆಳಕಿಗೆ  ನೀ ಮೌನದೀವಿಗೆ
ನಿನ್ನ ನೆನಪಾಗುತಿದೆ ಅಪ್ಪಾ  ಹೃದಯ ಮಿಡಿಯುತಿದೆ  ಅಪ್ಪಾಅಮ್ಮ ನಿಮ್ಮಿಬ್ಬರ ಹೊರತು ಮತ್ತೇನು ಬೇಡವಾಗಿದೆ  ತಟದಲ್ಲಿ ಕಾದು ಕುಳಿತಿರುವೆ  ಒಮ್ಮೆಯಾದರು ಬರುವೆಯೆಂದು 
ನಿನ್ನಲ್ಲಿ ಮಾತನಾಡಬೇಕು ಅಪ್ಪಾ  ನಡೆಯುದನ್ನು ಕಲಿತ ಗಳಿಗೆ ನೀ ಅಗಲಿದ್ದು  ದೇವ ನಿನ್ನನ್ನು ತನ್ನೆಡೆಗೆ ಸೆಳೆದುಬಿಟ್ಟ  ಅಪ್ಪಾ ಒಮ್ಮೆ ಬಂದುಬಿಡು  ನನ್ನ ಅಮ್ಮನಿಗಾಗಿ ಅವಳ ಮಾಸಿದ  ಕಣ್ಣಿನಲ್ಲಿ ಅಡಗಿರುವ ನೋವಿಗೆ  ನೀನು ಮಾತ್ರ ಸಮಾಧಾನ ಮಾಡಬಲ್ಲೆ 
ನಿನಗಾಗಿ ಅವಳು ಕಾಯದ ದಿನವಿಲ್ಲ  ಪ್ರಪಂಚವರಿಯದ ನನ್ನ ಅಮ್ಮ  ಸುತ್ತುವರಿದ ಸುಳಿಯಿಂದ ನೀನೇ  ಬಿಡಿಸಬೇಕು , ಅಪ್ಪಾ ನನಗಿಂತಲೂ  ನನ್ನ ಅಮ್ಮನ ನಗುವಿಗಾಗಿ ನೀ ಬರಬೇಕು 
ಎಲ್ಲಿ ಅಡಗಿರುವೆ  ನೀಲನಭದ ಗಾಳಿಯಲಿ  ಲೀನಗೊಂದೆಯಾ ಅಪ್ಪಾ ಕರ್ತವ್ಯ ಮರೆತು ಹೋಗದಿರು, ನಿನಗಾಗಿ ಕಾಯುತಿರುವೆ  ಕಣ್ಣೀರು ತಡೆದು , ನಿನ್ನ ನೆನಪಿನೊಂದಿಗೆ
                                              ಮಾಲಿನಿ ಭಟ್ .(By ಕರ್ನಾಟಕ ಇನ್ಫೋಲೈನ್ on July 13, 2012 )

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು