fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಡಿಸೆಂಬರ್ 26, 2016

ಉರಿಲಿಂಗಪೆದ್ದಿ

ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ
ಕಾಲ: 1160
ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ ಸು. 1160.
ಕಳ್ಳತನ ಮಾಡುತಿದ್ದ ಪೆದ್ದಿ ಉರಿಲಿಂಗದೇವನ ಶಿಷ್ಯನಾಗಿ ಅವನ ನಂತರ ಅದೇ ಪೀಠದ ಮುಖ್ಯಸ್ಥನಾದ. ಅಸ್ಪೃಶ್ಯ ಜನಾಂಗದ ಪೆದ್ದಿ ವಿದ್ವಾಂಸನಾಗಿ, ಅನುಭಾವಿಯಾಗಿ, ಮಠದ ಮುಖ್ಯಸ್ಥನೂ ಆದದ್ದು ಆ ಕಾಲದ ಮಹತ್ವದ ಸಂಗತಿ. ಈತನ 366 ವಚನಗಳು ದೊರೆತಿವೆ. ಕರ್ನಾಟಕದಲ್ಲಿರುವ ಅಸ್ಪೃಶ್ಯ ಜನಾಂಗಗಳಿಗೆ ಸೇರಿದ ಮಠಗಳನ್ನು ಉರಿಲಿಂಗಪೆದ್ದಿಗಳ ಮಠವೆಂದೇ ಕರೆಯುವ ರೂಢಿ ಇದೆ.

ಅಯ್ಯಾ, ನಿಮ್ಮ ಶರಣರ ಚರಣದ ಭಕ್ತಿಯೇ
ಎನಗೆ ಸಾಲೋಕ್ಯಪದವಯ್ಯಾ.
ನಿಮ್ಮ ಶರಣರ ಅರ್ಚನೆ ಪೂಜೆಯೇ
ಎನಗೆ ಸಾಮೀಪ್ಯಪದವಯ್ಯಾ.
ಅಯ್ಯಾ, ನಿಮ್ಮ ಗಣಂಗಳ ಧ್ಯಾನವೇ
ಎನಗೆ ಸಾರೂಪ್ಯಪದವಯ್ಯಾ.
ಅಯ್ಯಾ, ನಿಮ್ಮ ಪುರಾತನರ ಜ್ಞಾನಾನುಭಾವ ಸಮರಸಾನಂದವೇ
ಎನಗೆ ಸಾಯುಜ್ಯಪದವಯ್ಯಾ.
ಇಂತೀ ಚತುರ್ವಿಧಪದಂಗಳನಲ್ಲದೆ ಅನ್ಯವ ನಾನರಿಯೆನಯ್ಯಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು