ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಸೋಮವಾರ, ಏಪ್ರಿಲ್ 24, 2017

ಪ್ರೀತಿ-ಪ್ರೇಮ

ಹೃದಯ ಬೇನೆಯ ಮತ್ತೊಂದು ಹೆಸರು

ಪ್ರಣಯಕ್ಕೆ ಮೊದಲ ಹೆಜ್ಜೆ
ಚಿಗುರುವ ಮೀಸೆಯ ವಯಸ್ಸಿನಲ್ಲಿ ಚಿಗುರುವ ಭಾವ
ಇದು ತುರಿಕೆ ಇದ್ದಂತೆ. ತುರಿಸಿಕೊಳ್ಳುವಾಗ ಸುಖವೋ ಸುಖ, ಆಮೇಲೆ ಉರಿ ಉರಿ
ಹೃದಯದಿಂದ ಆರಂಭವಾಗಿ ಮೆದುಳನ್ನೇ ಖಾಲಿ ಮಾಡುವ ಬೇನೆ
ಮೊಬೈಲ್ ಕಂಪೆನಿಗಳ ಲಾಭಮೂಲ
ಇದು ವೇದಾಂತಿಗಳ ಬ್ರಹ್ಮ ಇದ್ದಂತೆ ಅನಿರ್ವಚನೀಯ ಮತ್ತು ಅನುಭವ ಮಾತ್ರ ವೇದ್ಯ
ಪ್ರೇಮಿ ಜಗತ್ತಿಗೆ ಹೆದರಲಾರ, ಅವನ ಗತ್ತು ಮತ್ತು ಜಗತ್ತು ಎರಡೂ ಬೇರೆ
ಕಣ್ಣಿಂದ ಆರಂಭವಾಗುವ ಸೋಂಕು, ಅವನ ರೋಗವಿದು. 'ಮದ್ರಾಸ್ ' ಇದ್ದಂತೆ
ಪ್ರೇಮಿಗಳನ್ನು ದ್ವೇಷಿಸುವವರೆಲ್ಲ ಆರೇಂಜ್ಡ್ ಮ್ಯಾರೇಜ್ ಆದವರು
ಪ್ರೇಮಕ್ಕೆ ಜಿಂದಾಬಾದ್ ಎನ್ನುವವರು ಬದುಕು ಬರ್ಬಾದ್ ಆಗದಂತೆಯೂ ಎಚ್ಚರವಹಿಸಬೇಕಾಗುತ್ತೆ
ಪ್ರೀತಿಗೆ ಕಣ್ಣಿಲ್ಲ. ಹಾಗಾಗೇ ಪ್ರೀತಿಸಿದವರಿಗೆ ಬೇರೇನೂ ಕಾಣಿಸುವುದಿಲ್ಲ
ಪ್ರೇಮಿಗಳಿಗೆ ಸಮಾಜ ಕೊಡುವ ಶಿಕ್ಷೆಗೆ 'ಗಲ್ಲು ಶಿಕ್ಷೆ' ಎನ್ನುಬಹುದು
ಒಬ್ಬರಿಗೊಬ್ಬರು ಪರಸ್ಪರ ಕೋಳ ತೊಡಿಸಿಕೊಳ್ಳುವ ಪ್ರಕ್ರಿಯೆ
ನೋಡಿ ತಿಳಿ, ಮಾಡಿ ಕಲಿ ಎಂಬ ನಿಯಮ ಇದಕ್ಕೆ ಅನ್ವಯಿಸದು. ನೋಡಿ ತಿಳಿದವ ಮಾಡಲು ಹೋಗುವುದಿಲ್ಲ
ಇದನ್ನು ಗೆಲ್ಲುವುದೆಂದರೆ ಅದಕ್ಕೆ ಸೋಲುವುದೇ
-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು