ಅಂಕಿತ ನಾಮ: ಎನ್ನಯ್ಯ ಚೆನ್ನರಾಮ
ಕಾಲ: ೧೧೬೦
ದೊರಕಿರುವ ವಚನಗಳು: 7 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: ಪುರುಷೋತ್ತಮಭಟ್ಟ, ಸೀತಮ್ಮ
ಹುಟ್ಟಿದ ಸ್ಥಳ: ಕಲ್ಬುರ್ಗಿ ಜಿಲ್ಲೆಯ ಅಳಂದ
ಪರಿಚಯ: ಕಾಲ ಸು. 1160.
ಸ್ಥಳ: ಕಲ್ಬುರ್ಗಿ ಜಿಲ್ಲೆಯ ಅಳಂದ. ಹರಿಹರ ಈತನ ಬಗ್ಗೆ ರಗಳೆಯೊಂದನ್ನು ಬರೆದಿದ್ದಾನೆ. ಅಬ್ಬಲೂರು ಶಾಸನದಲ್ಲಿ ಇವನ ಉಲ್ಲೇಖವಿದೆ. ತಂದೆ: ಪುರುಷೋತ್ತಮಭಟ್ಟ, ತಾಯಿ: ಸೀತಮ್ಮ. ಪುಲಿಗೆರೆಯ ಸೋಮೇಶ್ವರನು ಈತನ ಕನಸಿನಲ್ಲಿ ಬಂದು ಪರಧರ್ಮಗಳನ್ನು ಜಯಿಸುವಂತೆ ಹೇಳಿದ; ಹಾಗಾಗಿ ಇವನು ಅಬ್ಬಲೂರಿಗೆ ಬಂದು ಅಲ್ಲಿನ ಜೈನರೊಡನೆ ವಾದಮಾಡಿ ಅಲ್ಲಿನ ಬ್ರಹ್ಮೇಶ್ವರ ದೇವಸ್ಥಾನದಲ್ಲಿ ತಲೆ ಕತ್ತರಿಸಿಕೊಂಡು ಮತ್ತೆ ದೇವರು ಅವನನ್ನು ಬದುಕಿಸಿದ ಪವಾಡ ನಡೆಯಿತು. ಬಸದಿಯಲ್ಲಿ ಸೋಮೇಶ್ವರಲಿಂಗ ಸ್ಥಾಪನೆ ಮಾಡಿದ ಎಂಬ ಕಥೆ ಶಾಸನದಲ್ಲಿ ಇದೆ. ಈತನ ಪವಾಡವನ್ನು ಚಿತ್ರಿಸುವ ಶಿಲ್ಪಗಳು ಅಲ್ಲಿನ ದೇವಸ್ಥಾನದಲ್ಲಿವೆ. ಇವನ 7 ವಚನಗಳು ದೊರೆತಿವೆ, ಕಾಯ-ಜೀವ ಭೇದ, ನಿತ್ಯಮುಕ್ತನ ಸ್ಥಿತಿಗಳನ್ನು ವರ್ಣಿಸಿದ್ದಾನೆ.
ಅಶನ ವ್ಯಸನ ಸರ್ವವಿಷಯಾದಿಗಳಲ್ಲಿ ಹುಸಿದು,
ಪಿಸುಣತ್ವದಿಂದ ಗಸಣಿಗೊಂಡು,
ಮಾಡಿಸಿಕೊಂಬುದು ಸದ್ಗುರುವಿಗೆ ಸಂಬಂಧವಲ್ಲ.
ತಿಲರಸ-ವಾರಿಯ ಭೇದದಂತೆ, ಮಣಿಯೊಳಗಿದ್ದ ಸೂತ್ರದಂತೆ
ಅಂಗವ ತೀರ್ಚಿ ಪಾಯ್ಧು ನಿಂದ ಅಹಿಯ ಅಂಗದಂತೆ
ಗುರುಸ್ಥಲಸಂಬಂಧ,
ಎನ್ನಯ್ಯ ಚೆನ್ನರಾಮೇಶ್ವರಲಿಂಗವನರಿಯಬಲ್ಲಡೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.