fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಸೆಪ್ಟೆಂಬರ್ 26, 2017

ಏಲೇಶ್ವರ ಕೇತಯ್ಯ

ಅಂಕಿತ ನಾಮ: ಏಲೇಶ್ವರಲಿಂಗ
ಕಾಲ: ೧೧೬೬
ದೊರಕಿರುವ ವಚನಗಳು: 74 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ: - -
ಹುಟ್ಟಿದ ಸ್ಥಳ: ಕಲ್ಬುರ್ಗಿ ಜಿಲ್ಲೆಯ ಏಲೇರಿ (ಏಲೇಶ್ವರ)
ಪರಿಚಯ: ಕಾಲ ಸು. 1166.
ಸ್ಥಳ: ಕಲ್ಬುರ್ಗಿ ಜಿಲ್ಲೆಯ ಏಲೇರಿ (ಏಲೇಶ್ವರ). 
ಹೆಂಡತಿ: ಸಾವಿದೇವಿಯಮ್ಮ. 
ಬೇಸಾಯಗಾರ. ಈತನ 74 ವಚನಗಳು ದೊರೆತಿವೆ. ವ್ರತ, ಆಚಾರ, ನಿಯಮಗಳ ಪಾಲನೆ ಕುರಿತು ಪ್ರಸ್ತಾಪಿಸಿದ್ದಾನೆ.


ಅನ್ಯರ ದ್ರವ್ಯವ ಅಪಹರಿಸಿಕೊಂಡಲ್ಲಿ ಅದು ತನಗೆ ಅನ್ಯದೈವ.
ತನ್ನ ಕ್ರೀಯಲ್ಲದಲ್ಲಿ ಮನ ಮುಟ್ಟಿ ನೆನೆದಾಗವೆ ಅದು ಅನ್ಯಾಹಾರ.
ಇದಿರ ಉಪಚರಿಯಕ್ಕೆ ನಾನೊಂದು ವ್ರತವ ಹಿಡಿದು
ನಡೆದೆಹೆನೆಂಬುದೆ ಪರಪಾಕದ ಪಾಕುಳ.
ಇಂತಿವರಲ್ಲಿ ಮನ ಹೇಸಿ, ತನು ಕರಗಿ, ಪಕ್ಷಪಾತವೆಂಬ ಪಾತಕವ ಬಿಟ್ಟು,
ನಿಶ್ಚಯದಲ್ಲಿ ನಿಂದ ವ್ರತಾಂಗಲಿಂಗಿ ಮತ್ರ್ಯರ ಸುಗುಣ ದುರ್ಗುಣವನೊಲ್ಲ,
ನಿತ್ಯಾನಿತ್ಯವ ಮುಟ್ಟಿ ಮತ್ರ್ಯರ ಕರ್ಕಶವನೊಲ್ಲ.
ಭಕ್ತಿಯಲ್ಲಿ ತಿಳಿದು, ಜ್ಞಾನದಲ್ಲಿ ನಿಂದು, ವೈರಾಗ್ಯದಲ್ಲಿ ಸಲೆಸಂದು-
ಇಂತೀ ತ್ರಿವಿಧದಲ್ಲಿ ನಿಧಾನಿಸಿ ನಿಂದು,
ಕ್ರೀಯೇ ಘಟವಾಗಿ, ಆಚಾರವೇ ಆತ್ಮವಾಗಿ,
ಅನುಸರಣೆಯಿಲ್ಲದ ನಿಶ್ಚಯವೇ ನಿಜತತ್ವಕೂಟವಾಗಿ
ತೊಳಗಿ ಬೆಳಗುತ್ತಿರಬೇಕು, ಏಲೇಶ್ವರಲಿಂಗದಲ್ಲಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು