ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ನವೆಂಬರ್ 22, 2017

ಅಮ್ಮ ಹಚ್ಚಿದೊಂದು ಹಣತೆ

ಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ ।।

ಕಪ್ಪು ಕಡಲಿನಲ್ಲಿ ದೋಣಿ
ದಿಕ್ಕು ತಪ್ಪಲು
ದೂರದಲ್ಲಿ ತೀರವಿದೆ
ಎಂದು ತೋರಲು ।। ಅಮ್ಮ ।।

ಕೃತಕ ದೀಪ ಕತ್ತಲಲ್ಲಿ
ಕಳೆದು ಹೋಗದಂತೆ
ಸೂರ್ಯ ಚಂದ್ರ ತಾರೆಯಾಗಿ
ಹೊಳೆದು ಬಾಳುವಂತೆ ।। ಅಮ್ಮ ।।

ಅಂತರಂಗದಲ್ಲಿ ನೂರು
ಕಗ್ಗತ್ತಲ ಕೋಣೆ
ನಾದ ಬೆಳಕ ತುಂಬಲು
ಮಿಡಿದ ಹಾಗೆ ವೀಣೆ ।। ಅಮ್ಮ ।।

ಸಾಹಿತ್ಯ – M R ಕಮಲ
ಸಂಗೀತ – ಸಿ ಅಶ್ವಥ್
ಗಾಯನ – ಎಂ ಡಿ ಪಲ್ಲವಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು