ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಮಾರ್ಚ್ 22, 2018

ಅಮ್ಮ ಖುಷಿಪಟ್ಟ ದಿನ (Laughed the Mother)



ನಾ ಹುಟ್ಟಿದ ಮೇಲೆ ತಾನೆ 
ನೀ ನಿನಗಾಗಿ ಬದುಕೋದ ಮರೆತದ್ದು..
ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು
ಎಂತಹ ಅನುಬಂದವಿದು 
ಸೃಷ್ಟಿ ಕರ್ತನ ನಿಷ್ಕಲ್ಮಶ ಸಂಬಂದವಿದು..

ನಾ ಗರ್ಭದಲ್ಲಿರುವಾಗಲೇ 
ನನ್ನ ಮೇಲೆ ಕಟ್ಟತೊಡಗಿದ 
ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ..
ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..



ಅತ್ತರೆ ಹಸಿವೆಂದು 
ಮೊದಲು ಎದೆಹಾಲ ಉಣಿಸಿ..
ನನ್ನ ಖುಶಿಗೆಂದು ಅಪ್ಪನಿಂದ 
ಏನೆಲ್ಲಾ ಆಟಾಸಾಮಾನ ತರಸಿ..
ನನ್ನ ನಗುವ ನೀ ನೋಡುತ್ತಿದ್ದೆ..



ತುತ್ತು ತಿನ್ನಲು ಹಟತೊಟ್ಟರೆ 
ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ 
ನನ್ನ ಅಂಬಾರಿಯಂತೆ ಕೂರಿಸಿ 
ಏನೆಲ್ಲಾ ಆಟ ಆಡಿಸಿ 
ಚಂದಮಾಮನ ಕೊಡಿಸೋ ಆಸೆ ತೋರಿಸಿ 
ನನ್ನ ಕಿಲ ಕಿಲ ನಗುವಲಿ 
ಆ ನಗುವ ನಡುವಲಿ ತುತ್ತು ತಿನ್ನಿಸಿ 
ಏನೆಲ್ಲಾ ಸಂತಸವ ಕಾಣುತ್ತಿದ್ದೆ..



ನೀನು ನಿನಗೋಸ್ಕರ 
ಅಂದಿನಿಂದ ಖುಷಿಪಟ್ಟ ದಿನ 
ನಾ ನೋಡಲೇ ಇಲ್ಲವಲ್ಲ 
ಕಾರಣ ನಿನಗೆ ನಾನೇ ಎಲ್ಲ ಅಲ್ಲ..
ನನ್ನ ಕಣ್ಣಲೊಂದು ಹನಿ ಬಿದ್ದರೆ 
ಅಂದು ಮರುಗಿದವಳು ನೀನೆ 
ಇಂದಿಗೂ ಎಲ್ಲಿದ್ದರು ಕನಳುವಳು ನೀನೆ..
ನಿನ್ನ ಋಣ ಹೇಗೆ ತೀರಿಸಲಿ 
ಮರು ಜನ್ಮದಲ್ಲಾದರೂ ನನಗೆ 
ಕರುಣಿಸು ನಿನ್ನ ಸ್ಥಾನವ...



ಕೃಪೆ : ಜಗನ್ನಾಥ ಆರ್.ಏನ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು