ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶುಕ್ರವಾರ, ಜುಲೈ 20, 2018

ಮಕ್ಕಳ ಮನಸು

ಮಕ್ಕಳ ಮನಸು ಮಲ್ಲಿಗೆ
ಮಕ್ಕಳ ಮನಸು ಮಲ್ಲಿಗೆ ಹೂವಿನ
ಹಾಗೆ ಬಿಳುಪಾಗಿಹುದು
ಅರಳಿದ ಮಲ್ಲಿಗೆ ಹೂವಿನ ಹಾಗೆ
ಪರಿಮಳ ಸೂಸುತಲಿಹುದು
ನೋಡುವರ ಮರುಳು ಮಾಡುವ
ಮುಗ್ಧತೆ ಮೊಗದಲ್ಲಿಹುದು
ನೋಡುಗರಲಿ ಖುಷಿಯ ಹೆಚ್ಚಿಸೊ
ಉಲ್ಲಾಸದ ಚಿಲುಮೆ ನಗುವಲ್ಲಿಹುದು.
ಮಗುವಿನ ಮುಗ್ಧ ಮನಸು
ರಾಗದ್ವೇಷಗಳಿರದೆ ಶುಭ್ರವಾಗಿಹುದು
ಮಗುವು ಬೆಳೆಯುವ ಪರಿಸರ
ಮಾತ್ರ ಘನಘೋರವಾಗಿಹುದು
ಬಿಳಿಯ ಮನಸಿನಾ ಮೇಲೆ
ಚೆಲ್ಲಿದ ಬಣ್ಣ ಮೆತ್ತಿಕೊಳ್ಳುವುದು
ಯಾವ ಬಣ್ಣ ಚೆಲ್ಲುವಿರೋ ಅದೇ
ಬಣ್ಣವನ್ನು ಅವು ಪ್ರದರ್ಶಿಸುವುದು
ಬಣ್ಣ ಆಯ್ದುಕೊಳ್ಳುವ ಅವಕಾಶ
ಮಗುವ ಕೈಯಲಿಲ್ಲ
ಮಗುವನ್ನು ಹೇಗೆ ಬೆಳೆಸುವುದು
ಎಂದು ತಿಳಿಯಬೇಕು ಎಲ್ಲ.
ಭವ್ಯ ಭಾರತದ ಭವಿಷ್ಯವು
ಮಕ್ಕಳ ಕೈಯಲ್ಲಿಹುದು
ಮುಂದಿನ ಭಾರತದ ಅಡಿಪಾಯ
ಇಂದು ನಮ್ಮ ಕೈಯಲ್ಲಿಹುದು.
ಬೆಳೆಸಿರಿ ಮಕ್ಕಳನು ಹೂವಂತೆ
ಯಾವಾಗಲೂ ಖುಷಿಯಲಿ ನಗುವಂತೆ
ವಿದ್ಯೆ ಬುದ್ಧಿ ತಿಳಿವಳಿಕೆಯ ನೀಡಿ
ಬೆಳೆಸಿರಿ ಮಕ್ಕಳನು ಬಾಗುವ ಬಳ್ಳಿಯಂತೆ
ಮಹಾಂತೇಶ ಎಸ್. ಪಾಟೀಲ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು