fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಡಿಸೆಂಬರ್ 24, 2018

ಪ್ರತಿಫಲ

ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಿಂದುಂಟಾಗುವ ಫಲ
ಕಲ್ಲು ಹೊಡೆದಿದ್ದ ಕೈ ಪ್ರತಿಯಾಗಿ ಉದುರಿದ ಹಣ್ಣು
ಮಾಡಿದ್ದುಣ್ಣುವ ಮಹರಾಯರ ಮಹತ್ಕಾರ್ಯಗಳ ಫಲ
ಗೋಡೆಗೆ ಬಡಿದ ಚೆಂಡು
ಪ್ರತಿಫಲಾಪೇಕ್ಷೆ ಇಟ್ಟುಕೊಳ್ಳದೇ ಕರ್ಮ ಮಾಡು ಎಂದು ಕೃಷ್ಣ ಅರ್ಜುನನಿಗೆ ಹೇಳಿರುವುದರಿಂದ ನಾವಿದಕ್ಕೆ ತಲೆಕೆಡಿಸಿಕೊಂಡಿಲ್ಲ
ಕಲಿಯುಗದಲ್ಲಿ ಪ್ರವೃತ್ತಿಯ ಪ್ರೇರಕವೇ ಇದು
ಪ್ರತಿಫಲಾಪೇಕ್ಷೆಯಿಲ್ಲದೇ ಯಾರಾದರೂ ಉಪಕಾರ ಮಾಡಿದರೆ ಅದು ಅಕಸ್ಮಾತ್ತಾಗಿ ಆಗಿರುವ ಸಂಭವವೂ ಇದೆ
ಇದರ ಲಭ್ಯತೆಯನ್ನನುಸರಿಸಿ ಕಾರ್ಯ ಮಾಡಬೇಕೋ ಬೇಡವೋ ಎಂಬುದರ ನಿರ್ಣಯವಾಗುತ್ತದೆ.
ಎಷ್ಟು ಸಿಗುತ್ತೆ ? ಎಂದರೆ ಇದೇ ಅರ್ಥ
ಕೆಲಸ ಮಾಡದಿದ್ದರೂ ಫಲ ಸಿಗುತ್ತೆ ಸರ್ಕಾರಿ ಅಧಿಕಾರಿಗಳಿಗೆ
ದೇವರಿಗೆ ನೈವೇದ್ಯ ಮಾಡಿದ್ದರ ಫಲವೆಂದರೆ, ಅದನ್ನು ನಾವು ಮತ್ತೆ ನೈವೇದ್ಯ ಮಾಡುವುದೇ
ಪ್ರತಿಫಲಕ್ಕಾಗಿ ಕಾಯುತ್ತಾ 'ಕುಳಿತುಕೊಳ್ಳುವುದಕ್ಕಿಂತ' ಕಾಯುತ್ತಾ ಮಲಗುವುದು ಹೆಚ್ಚು ವಾಸಿ
ಲಕ್ಷಗಟ್ಟಲೆ ದಾನ ಕೊಟ್ಟವಗೆ ಸನ್ಮಾನ ಮಾಡುವುದೇ ಅತನಿಗೆ ಪ್ರತಿಫಲ

-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು