- ಕ್ರಿಯೆಗೆ ತಕ್ಕ ಪ್ರತಿಕ್ರಿಯೆಯಿಂದುಂಟಾಗುವ ಫಲ
- ಕಲ್ಲು ಹೊಡೆದಿದ್ದ ಕೈ ಪ್ರತಿಯಾಗಿ ಉದುರಿದ ಹಣ್ಣು
- ಮಾಡಿದ್ದುಣ್ಣುವ ಮಹರಾಯರ ಮಹತ್ಕಾರ್ಯಗಳ ಫಲ
- ಗೋಡೆಗೆ ಬಡಿದ ಚೆಂಡು
- ಪ್ರತಿಫಲಾಪೇಕ್ಷೆ ಇಟ್ಟುಕೊಳ್ಳದೇ ಕರ್ಮ ಮಾಡು ಎಂದು ಕೃಷ್ಣ ಅರ್ಜುನನಿಗೆ ಹೇಳಿರುವುದರಿಂದ ನಾವಿದಕ್ಕೆ ತಲೆಕೆಡಿಸಿಕೊಂಡಿಲ್ಲ
- ಕಲಿಯುಗದಲ್ಲಿ ಪ್ರವೃತ್ತಿಯ ಪ್ರೇರಕವೇ ಇದು
- ಪ್ರತಿಫಲಾಪೇಕ್ಷೆಯಿಲ್ಲದೇ ಯಾರಾದರೂ ಉಪಕಾರ ಮಾಡಿದರೆ ಅದು ಅಕಸ್ಮಾತ್ತಾಗಿ ಆಗಿರುವ ಸಂಭವವೂ ಇದೆ
- ಇದರ ಲಭ್ಯತೆಯನ್ನನುಸರಿಸಿ ಕಾರ್ಯ ಮಾಡಬೇಕೋ ಬೇಡವೋ ಎಂಬುದರ ನಿರ್ಣಯವಾಗುತ್ತದೆ.
- ಎಷ್ಟು ಸಿಗುತ್ತೆ ?
ಎಂದರೆ ಇದೇ ಅರ್ಥ
- ಕೆಲಸ ಮಾಡದಿದ್ದರೂ ಫಲ ಸಿಗುತ್ತೆ ಸರ್ಕಾರಿ ಅಧಿಕಾರಿಗಳಿಗೆ
- ದೇವರಿಗೆ ನೈವೇದ್ಯ ಮಾಡಿದ್ದರ ಫಲವೆಂದರೆ, ಅದನ್ನು ನಾವು ಮತ್ತೆ ನೈವೇದ್ಯ ಮಾಡುವುದೇ
- ಪ್ರತಿಫಲಕ್ಕಾಗಿ ಕಾಯುತ್ತಾ 'ಕುಳಿತುಕೊಳ್ಳುವುದಕ್ಕಿಂತ'
ಕಾಯುತ್ತಾ ಮಲಗುವುದು ಹೆಚ್ಚು ವಾಸಿ
- ಲಕ್ಷಗಟ್ಟಲೆ ದಾನ ಕೊಟ್ಟವಗೆ ಸನ್ಮಾನ ಮಾಡುವುದೇ ಅತನಿಗೆ ಪ್ರತಿಫಲ
- ⇝-ವಿಶ್ವನಾಥ ಸುಂಕಸಾಳ
- ⇝-ವಿಶ್ವನಾಥ ಸುಂಕಸಾಳ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.