fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ಡಿಸೆಂಬರ್ 31, 2020

ನಗಿಸಿದ್ದು ಕನ್ನಡ

ನಾನು ನಕ್ಕಾಗ ನಗಿಸಿದ್ದು ಕನ್ನಡ,
ನಾನು ಅತ್ತಾಗ ಅಳಿಸಿದ್ದು ಕನ್ನಡ,
ನಾನು ಪ್ರೀತಿಸಿದಾಗ ಮೂಡಿದ್ದು ಕನ್ನಡ,
ನಾನು ಪ್ರೇಮಿಸಿದಾಗ ಅರಳಿದ್ದು ಕನ್ನಡ,
ನಾನು ಕಾಮಿಸಿದಾಗ ಕನಲಿದ್ದು ಕನ್ನಡ,

ನನ್ನ ಖುಷಿಗೆ ಜೊತೆಯಾಗಿದ್ದು ಕನ್ನಡ,
ನನ್ನ ಕೋಪಕ್ಕೆ ಸೇರಿಕೊಂಡಿದ್ದು ಕನ್ನಡ,
ನನ್ನ ಖಿನ್ನತೆ ವ್ಯಕ್ತಪಡಿಸಿದ್ದು ಕನ್ನಡ,
ನನ್ನ ಭಕ್ತಿಯೂ ಕನ್ನಡ,
ನನ್ನ ಶಕ್ತಿಯೂ ಕನ್ನಡ
ನನ್ನ ಮುಕ್ತಿಯೂ ಕನ್ನಡ,

ನನ್ನಲ್ಲಿ ಅರಿವು ಮೂಡಿಸಿದ್ದು ಕನ್ನಡ,
ನನ್ನಲ್ಲಿ ಅಹಂಕಾರ ಬೆಳೆಸಿದ್ದೂ ಕನ್ನಡ,
ನನ್ನಲ್ಲಿ ಹೆಮ್ಮೆ ಬೆಳಗಿಸಿದ್ದೂ ಕನ್ನಡ,
ನನ್ನಲ್ಲಿ ಕೀಳರಿಮೆ ತಂದದ್ದೂ ಕನ್ನಡ,
ನನ್ನಲ್ಲಿ ಅಭಿಮಾನ ಸೇರಿಸಿದ್ದು ಕನ್ನಡ,

ನನಗೆ ದೃಷ್ಟಿಯಾಗಿ ಕಂಡದ್ದು ಕನ್ನಡ,
ನನಗೆ ಧ್ವನಿಯಾಗಿ ಕೇಳಿದ್ದು ಕನ್ನಡ,
ನನಗೆ ವಾಸನೆಯಾಗಿ ಗ್ರಹಿಸಿದ್ದು ಕನ್ನಡ,
ನನಗೆ ರುಚಿಯಾಗಿ ಸವಿದದ್ದು ಕನ್ನಡ,
ನನಗೆ ಸ್ಪರ್ಶವಾಗಿ ಮುಟ್ಟಿದ್ದು ಕನ್ನಡ,

ಮಾತು ಕಲಿಸಿದ್ದು ಕನ್ನಡ,
ವಿದ್ಯೆ ನೀಡಿದ್ದು ಕನ್ನಡ ,
ಉದ್ಯೋಗ ದೊರಕಿಸಿದ್ದು ಕನ್ನಡ,
ಬದುಕು ದಯಪಾಲಿಸಿದ್ದು ಕನ್ನಡ,
ನಮ್ಮ ನಿಮ್ಮ ಗೆಳೆತನಕ್ಕೆ ಸಾಕ್ಷಿಯಾದದ್ದು ಕನ್ನಡ,

ನಾನು ಕನ್ನಡ - ನೀವೂ ಕನ್ನಡ,
ಅವನೂ ಕನ್ನಡ - ಅವಳೂ ಕನ್ನಡ,
ಎಲ್ಲವೂ ಕನ್ನಡ - ಎಲ್ಲರೂ ಕನ್ನಡ,
ಎಲ್ಲೆಲ್ಲೂ ಕನ್ನಡ - ಎಂದೆಂದೂ ಕನ್ನಡ,
ನಮ್ಮೆಲ್ಲರ ಜೀವನವೇ ,
ಕನ್ನಡ ಕನ್ನಡ ಕನ್ನಡ........
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಸ್ಸುಗಳ ಅಂತರಂಗದ ಚಳವಳಿ.

ಕನ್ನಡ ರಾಜ್ಯೋತ್ಸವ ದ ಶುಭಾಶಯಗಳು

ಬುಧವಾರ, ಡಿಸೆಂಬರ್ 30, 2020

ಡಾ. ವಿಷ್ಣುವರ್ಧನ ರವರ ರಸ್ತೆ (ಬನಶಂಕರಿ - ಕೆಂಗೇರಿ 12.3 KM)


     ಕರ್ನಾಟಕದ ಕರ್ಣ, ಬಂಗಾರದ ಕಳಸ, ಸಿಂಹಾದ್ರಿಯ ಸಿಂಹ, ಸಾಹಸ ಸಿಂಹ, ಕರುನಾಡ ಜಮೀನ್ದಾರ್ರು, ಅಭಿನಯ ಭಾರ್ಗವ ಬಿರುದಾಂಕಿತ ಡಾ. ವಿಷ್ಣುವರ್ಧನ್ ಅವರ ಹೆಸರನ್ನು ಬೆಂಗಳೂರಿನ ಪ್ರಮುಖ ರಸ್ತೆಗೆ ಇಡುವ ಮೂಲಕ ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಗೌರವ ಸೂಚಿಸುತ್ತಿದೆ.
     ಬೆಂಗಳೂರಿನ ಬನಶಂಕರಿಯಿಂದ ಕೆಂಗೇರಿ ತನಕ ಇರುವ ರಸ್ತೆಗೆ ದಿನಾಂಕ 2-2-2014ರಂದು 'ಡಾ. ವಿಷ್ಣುವರ್ಧನ ರಸ್ತೆ' ಎಂದು ನಾಮಕರಣ ಮಾಡಲಾಗಿದೆ. ಸುಮಾರು 12.3 ಕಿ.ಮೀ ಉದ್ದದ ರಸ್ತೆಗೆ ವಿಷ್ಣುವರ್ಧನ ಅವರ ಹೆಸರಿಡುತ್ತಿದ್ದಂತೆ ಹೊಸ ಇತಿಹಾಸ ನಿರ್ಮಾಣವಾಗಿದೆ. ದೇಶದಲ್ಲೇ ಅತಿ ಉದ್ದದ ರಸ್ತೆಗೆ ತನ್ನ ಹೆಸರನ್ನು ಹೊಂದಿದ ಏಕೈಕ ಕಲಾವಿದ ಎಂಬ ಕೀರ್ತಿ ವಿಷ್ಣು ಅವರಿಗೆ ಸಲ್ಲುತ್ತದೆ ಎಂದು ಡಾ. ವಿಷ್ಣುವರ್ಧನ ಸೇನಾ ಸಮಿತಿ ಹೇಳಿದೆ.
     ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹೆಸರು ಚಿರಸ್ಥಾಯಿ 'ಡಿಟೆಕ್ಟೀವ್ ಸಾಹಸಸಿಂಹ' ಎಂಬ ಹೆಸರಿನಲ್ಲಿ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರು ಕಾಮಿಕ್ ಸ್ಟ್ರಿಪ್ ಸರಣಿಯನ್ನು ಹೊರತಂದಿದ್ದರು. ಆಪ್ತಮಿತ್ರ ಗೆಟೆಪ್ ನಲ್ಲಿ ಕಾಮಿಕ್ ಹೀರೋ ಆಗಿ ವಿಷ್ಣುವರ್ಧನ್ ಅವರನ್ನು ಪರಿಚಯಿಸಲಾಗಿದೆ. ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 7 ಅಡಿಗಳ ಕಂಚಿನ ಪುತ್ಥಳಿಯನ್ನು ಮಾರ್ಚ್ 1, 2012 ರಂದು ಬೆಂಗಳೂರಿನ ಗೌರಿಪಾಳ್ಯದಲ್ಲಿ ಅನಾವರಣ ಮಾಡಲಾಗಿದೆ.
     ಪಾರ್ಕ್: ಪಟ್ಟಾಭಿರಾಮನಗರ ವ್ಯಾಪ್ತಿಯ ಜಯನಗರ 4ನೇ "ಟಿ" ಬ್ಲಾಕ್ ಬಡಾವಣೆಯ 28ನೇ ಮುಖ್ಯರಸ್ತೆ ಹಾಗೂ 35ನೇ ಅಡ್ಡರಸ್ತೆ ನಡುವಿರುವ ವಿಶ್ರಾಂತಿ ವನಕ್ಕೆ 'ಡಾ. ವಿಷ್ಣುವರ್ಧನ್ ವಿಶ್ರಾಂತಿ ವನ' ಎಂದು ನಾಮಕರಣ ಮಾಡಲಾಗಿದೆ. ಇದಲ್ಲದೆ ಬಳ್ಳಾರಿಯಲ್ಲಿ ಕನ್ನಡ ಚಿತ್ರರಂಗದ ಮೇರುನಟ ಡಾ.ವಿಷ್ಣು ಹೆಸರಿನಲ್ಲಿ ಜಿಂದಾಲ್ ಅವರು ನಿರ್ಮಿಸಿರುವ ಪಾರ್ಕ್ ಅನ್ನು ಸಾರ್ವಜನಿಕರಿಗೆ ಮಕ್ತಗೊಂಡಿದೆ.

ಮಂಗಳವಾರ, ಡಿಸೆಂಬರ್ 22, 2020

ಅಮ್ಮಾ ನೀನಿಲ್ಲದ ಊರು...

ಅಮ್ಮಾ ನೀನಿಲ್ಲದ ಊರಲ್ಲಿ
ನನಗೇನು ಕೆಲಸ
ಅಲ್ಲಿ ತೊನೆದಾಡುವ ನೆನಪುಗಳಷ್ಟೇ
ಜೋತಾಡುತ್ತಿವೆ ನೀ ಹೆಜ್ಜೆಯಿಟ್ಟಲ್ಲೆಲ್ಲ
ಕೂತಲ್ಲಿ ಕೂರಲಾಗದೇ ಬಳಲುತ್ತೇನೆ
ಕಿವಿಯಲ್ಲಿ ನಿನ್ನ ಮಾತು ತರಂಗಗಳಂತೆ ಅಪ್ಪಳಿಸಿ
ಇನ್ನಷ್ಟು ಮತ್ತಷ್ಟು ಕೇಳಬೇಕೆನಿಸುತ್ತದೆ
ಹಾಗೆ ಹಾಗೆ ನಿನ್ನ ಮಡಿಲ ತುಂಬೆಲ್ಲ
ನನ್ನನ್ನೇ ನಾ ಹರಡಿಕೊಂಡು
ಕಿತ್ತೊಗೆಯಬೇಕು “ಇಲ್ಲಾ ” ಎನ್ನುವ ಈ ಶಬ್ದವನ್ನೇ.
ಆದರೆ ಸಾಧ್ಯವಾಗದ ಮಾತು
ನೀನು ಇಲ್ಲಾ ಎನ್ನುವ ಸತ್ಯದಷ್ಟೆ.
ನೀನೂ ಮಹಿಳೆ
ನಿನ್ನ ರಕ್ತ ಮಾಂಸ ಹಂಚಿಕೊಂಡು ಹುಟ್ಟಿದ
ನಾನೂ ಮಹಿಳೆ
ಆದರೂ ನಿನ್ನೆತ್ತರಕ್ಕೆ ನಾ ಏರಲಾರೆ
ಮಗಳು ನನ್ನ ಮಡಿಲ ತುಂಬಿದ್ದರೂ
ಗೊತ್ತು ನನಗೆ ಏಕೆಂದು!
ಆ ನಿನ್ನ ಮುಗ್ಧ ನಗು
ಎಲ್ಲರೂ ನನ್ನ ಮಕ್ಕಳೆಂದು ಕಾಣುವ ಬಗೆ
ನಿಸ್ವಾರ್ಥ ನಿನ್ನ ಬದುಕು
ಬೇಕು ಎನ್ನುವುದ ಬಿಟ್ಟು
ಸಾಕು ಸಿಕ್ಕಷ್ಟೇ
ಎಂದಂದುಕೊಂಡೇ ಬದುಕಿದವಳು
ಕೊನೆಗೊಂದು ದಿನ
ನಿರಾಳವಾಗಿ ಅಂಗಾತ ಮಲಗಿದವಳು
ಈ ಶುಭದಿನಕೆ
ನನ್ನ ಬದುಕಲ್ಲಿ ಸಾಕ್ಷಿಯಾದವಳು

ಶುಕ್ರವಾರ, ಡಿಸೆಂಬರ್ 18, 2020

ಗೂಗಲ ಪುಟದ ವಿಚಿತ್ರಗಳು (Google lmgtfy Pages) 16

LMGTFY
(Let Me Google That For You)
(ಲೆಟ್ ಮಿ ಗೂಗಲ್ ದಟ್ ಫಾರ್ ಯು)
(ನಿಮಗಾಗಿ ಗೂಗಲ್ ಕೆಲಸವನ್ನು  ಮಾಡುತ್ತದೆ)

        ಗೂಗಲ್ ಅನ್ನು ಬಳಸಲು ತುಂಬಾ ಸೋಮಾರಿಯಾಗಿರುವವರಿಗೆ ನಾವು ಮಾಡಿದ ಕಿರು ಸೇವೆಯಾಗಿದೆ. ಹುಡುಕಾಟ ಪ್ರಶ್ನೆಯನ್ನು ನಮೂದಿಸಿದ ನಂತರ, ಫಲಿತಾಂಶಗಳಿಗೆ ಬದಲಾಗಿ, ನಿಮ್ಮ ಸೋಮಾರಿಯಾದ ಸ್ವೀಕರಿಸುವವರಿಗೆ ನೀವು ಮೇಲ್ ಕಳುಹಿಸುವ ಲಿಂಕ್ ಅನ್ನು ನೀವು ಪಡೆಯುತ್ತೀರಿ. ಲಿಂಕ್ ಅನ್ನು ಕ್ಲಿಕ್ ಮಾಡುವುದರಿಂದ ನಿಜವಾದ ಹುಡುಕಾಟವನ್ನು ಪ್ರಾರಂಭಿಸುತ್ತದೆ: ಹೀಗಾಗಿ, ಈ ಪರಿಧಿಯ ರೀತಿಯಲ್ಲಿ, ನೀವು ಅದನ್ನು ಅವರಿಗೆ ಗೂಗಲ್ ಮಾಡಿದ್ದೀರಿ. ಅವರು ಮಾಡಬೇಕಾಗಿರುವುದು ಲಿಂಕ್ ಅನ್ನು ಕ್ಲಿಕ್ ಮಾಡಿ. ತಂತ್ರಜ್ಞಾನದ ಒಂದು ಸುಂದರ ಉದಾಹರಣೆ ನಮಗೆ ವಿಷಯಗಳನ್ನು ಹೆಚ್ಚು ಸಂಕೀರ್ಣಗೊಳಿಸುತ್ತದೆ. ಕೆಳಗಿನ ಚಿತ್ರವನ್ನು ಕ್ಲಿಕ್ ಮಾಡಿ

ಮಂಗಳವಾರ, ಡಿಸೆಂಬರ್ 15, 2020

ಅ-ಅಃ ನಮ್ಮ ಜೋಡಿ

ಅಂದದ ಗೊಂಬೆ ನಿನಗೆ
ಭರಣ ತೋಡಿಸಿ
ಇಂದ್ರನ ಮಗಳು ನಾಚುವಂತೆ
ಳಕಲ್ ಸೀರೆ ಉಡಿಸಿ
ರ್ಕೋಳ್ಳೋ ಹಂಗ
ರ ಮಂದಿಯಲ್ಲಾ
ಕ್ಮಿನಿಯನ್ನು
ಲ್ಲಮ್ಮನ ಜಾತ್ರ್ಯಾಗ ನಾ
ತ್ಕೋಂಡು ನನ್ನ ಹೇಗಲಮ್ಯಾಲ
ಸಿರಿಲೆ ಸುತ್ತಾಡುವಾಗ
ಡನಾಡಿಗಳೆಲ್ಲ
ಯ್ ಎಂದು ಕೂಗಿ
ಸರದಲ್ಲಿ ಬಳಿ ಬಂದು
ಅಂದೆ ಬಿಡಬೇಕು. ನಮ್ಮನ್ ನೋಡಿ
ಅಃ ಎಂಥ ಅದ್ಭುತ,

ಯಾರ್ ಕೆಟ್ ಕಣ್ಣು ಬಿಳ್ದೆ ಇರ್ಲಿ ನಿಮ್ ಜೋಡಿ ಮ್ಯಾಲ ಅಂತ..

ಬುಧವಾರ, ಡಿಸೆಂಬರ್ 09, 2020

ಥಂಬ್ಲರ್ (Tumblr)

tumblr ಗೆ ಚಿತ್ರಗಳ ಫಲಿತಾಂಶಗಳು

ಸ್ಥಾಪನೆ: ಫೆಬ್ರವರಿ 2007; 12 ವರ್ಷಗಳ ಹಿಂದೆ
ಪ್ರಧಾನ ಕಚೇರಿಗಳು: ನ್ಯೂ ಯಾರ್ಕ್, U.S
ಉದ್ಯೋಗಿಗಳು: 411 (as of June 2017)
ಪ್ರಮುಖ ವ್ಯಕ್ತಿಗಳು: Jeff D'Onofrio (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ)
ಸಂಸ್ಥಾಪಕ: ಡೇವಿಡ್ ಕಾರ್ಪ್
ಮಾಲೀಕ: Verizon Media

ನಾಮನಿರ್ದೇಶನಗಳುಟೀನ್ ಚಾಯ್ಸ್ ಪ್ರಶಸ್ತಿ - ಚಾಯ್ಸ್ ಸೋಷಿಯಲ್ ನೆಟ್‌ವರ್ಕ್‌

ಮನುಷ್ಯ


ಗುರುವಾರ, ಡಿಸೆಂಬರ್ 03, 2020

ಪಬ್ಬು ಪಬ್ಬು / ಗಬ್ಬು ಗಬ್ಬು

ನಗರದ ಬೀದಿಗಳಲಿ ಈಗ ಎಲ್ಲೆಂದರಲ್ಲಿ ಪಬ್ಬು ಪಬ್ಬು

ನಗರದ ಬೀದಿಗಳಲಿ ಈಗ ಎಲ್ಲೆಂದರಲ್ಲಿ ಪಬ್ಬು ಪಬ್ಬು
**
ಪಬ್ಬುಗಳ ಒಳಗೆಲ್ಲಾ ಸದಾಕಾಲ ಏನೋ ಗಬ್ಬು ಗಬ್ಬು

ಭಾನುವಾರ, ನವೆಂಬರ್ 22, 2020

ಜೀವಜಲದಂತೆ ಅಮ್ಮ..

ಅಮ್ಮನಿಗಾಗಿ ನಾನಿಲ್ಲ
ಅಮ್ಮ ನನಗಿಲ್ಲ
ಅಮ್ಮಾ ಅನ್ನುವ ಕೂಗು
ಕೂಗಲು
ಅಮ್ಮನೇ ಇಲ್ಲ
ಆದರೂ
ನೆನಪು ಮಾಸುವುದಲ್ಲ
ಕದ ತಟ್ಟಿ
ಬಡಿದೆಬ್ಬಿಸುವ ಪರಿ
ಇನ್ನೂ ಬಿಟ್ಟಿಲ್ಲ
ಸದಾ ಮುಗುಳುನಗುವಮ್ಮ
ನಿನ್ನ ಕಂಗಳ ದೃಷ್ಟಿ
ಆ ನಿಲುವು
ಎದೆ ಬಾಗಿಲ ಬಿಟ್ಟು
ಸರಿದಿಲ್ಲವಲ್ಲ
ಮತ್ತೆ ನೀನಿಲ್ಲವೆಂದು
ಮತ್ಯಾಕೆ ನನಗೀ ತಾಕಲಾಟ?
ಕೇಳುವೆ ಆಗಾಗ
ನನ್ನ ನಾ
ಉಲಿಯುವೆ ಆಗ
ಅದು ಹಾಗೆ ಕಂದಾ
ಮನದ ಬಿಕ್ಕುಗಳಿಗೆ
ಏಕೈಕ ಮುಲಾಮು
ಎಟುಕುವುದೆಲ್ಲರಿಗೂ
ಗಳಿಗೆಗೊಮ್ಮೆ
ಬೇಕೆಂದಾಗಲೆಲ್ಲ
ದಾಹ ತೀರಿಸುವ
ಜೀವಜಲದಂತೆ

ಸೋಮವಾರ, ನವೆಂಬರ್ 09, 2020

ಇನ್‍ಸ್ಟಗ್ರ್ಯಾಮ್ (Instagram)

instagram ಗೆ ಚಿತ್ರಗಳ ಫಲಿತಾಂಶಗಳು
ಆರಂಭಿಕ ಬಿಡುಗಡೆಯ ದಿನಾಂಕ: ಅಕ್ಟೋಬರ್ 6, 2010
Android: 114.0.0.38.120 / ಅಕ್ಟೋಬರ್ 8, 2019; 10 ದಿನಗಳ ಹಿಂದೆ
iOS: 114.0 / ಅಕ್ಟೋಬರ್ 7, 2019; 11 ದಿನಗಳ ಹಿಂದೆ
ಮಾಲೀಕ: ಫೇಸ್‌ಬುಕ್
ಬಹುಮಾನಗಳು: Shorty Award for Apps

ನಾಮನಿರ್ದೇಶನಗಳು: Teen Choice Award for Choice Social Network

ಇನ್ಸ್ತಗ್ರಮ್ ಕೆವಿನ್ ಸ್ಯ್ಸ್ತ್ರೊಮ್ ಮತ್ತು ಮೈಕ್ ಕ್ರೀಗರ್ನಿಂದ ದಾಖಲಿಸಿದವರು, ಮತ್ತು ಒಂದು ಉಚಿತ ಮೊಬೈಲ್ ಅಪ್ಲಿಕೇಶನ್ ಅಕ್ಟೋಬರ್ ೨೦೧೦ ರಲ್ಲಿ ಆರಂಭಿಸಲಾಯಿತು. ಸೇವೆ ಬೇಗನೇ ಜನಪ್ರಿಯತೆ ಏಪ್ರಿಲ್ ೨೦೧೨ ಮತ್ತು ೩೦೦ ಮಿಲಿಯನ್ ಡಿಸೆಂಬರ್ ೨೦೧೪ ರ ಇನ್ಸ್ತಗ್ರಮ್ ಸೇಬು ಆಪ್ ಸ್ಟೋರ್ ಮತ್ತು ಗೂಗಲ್ ಪ್ಲ ಮೂಲಕ ವಿತರಿಸಲಾಗುತ್ತದೆ. ಬೆಂಬಲ ೧೦೦ ಮಿಲಿಯನ್ ಸಕ್ರಿಯ ಬಳಕೆದಾರರು ಗಳಿಸಿಕೊಂಡಿತು ತೃತೀಯ ಇನ್ಸ್ತಗ್ರಮ್ ಅಪ್ಲಿಕೇಶನ್ಗಳು ಬ್ಲ್ಯಾಕ್ಬೆರಿ ೧೦ ಮತ್ತು ನೋಕಿಯಾ ಸಿಂಬಿಯಾನ್ ಸಾಧನಗಳು ಲಭ್ಯವಿವೆ ಮಾಡುತ್ತದೆ ಅಪ್ಲಿಕೇಶನ್, ಐಫೋನ್, ಐಪ್ಯಾಡ್, ಐಪಾಡ್ ಟಚ್, ಮತ್ತು ಅನ್ರೊಇದ್ ಹ್ಯಾಂಡ್ಸೆಟ್ಗಳನ್ನು ಲಭ್ಯವಿದೆ.

ಜೇಡ ಹುಳು


ಭಾನುವಾರ, ನವೆಂಬರ್ 08, 2020

ಕನ್ನಡ ಇತಿಹಾಸ (6/11)

ಕೃಪೆ: ಕನ್ನಡದ ವಿಕಿಪೀಡಿಯ

ಸ್ವರಗಳು
· ಕನ್ನಡದಲ್ಲಿ ಒಟ್ಟು ೧೩ ಸ್ವರಗಳಿವೆ. ಅವನ್ನು "ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ" ಹೀಗೆ 'ಅ'ಕಾರದಿಂದ ಮೊದಲು ಮಾಡಿ, 'ಔ'ಕಾರದ ವರೆಗೆ ಕೊನೆ ಮಾಡಿ, ಹೀಗೆ ಬರೆಯುವುದು ಸಂಸ್ಕೃತ ವ್ಯಾಕರಣದ ಅನುಕರಣೆ. ಸಂಸ್ಕೃತದಲ್ಲಿ ಈ ಬಗೆಯಲ್ಲಿ ಬರೆಯಲು ಕಾರಣ ಅದರ ಮಾಹೇಶ್ವರ ಸೂತ್ರ ಮತ್ತು ಸಂಧಿನಿಯಮಗಳು
ಆದರೆ ಹೀಗೆ ಬರೆಯುವುದರಿಂದ ಕನ್ನಡದ ಸಂಧಿನಿಯಮಗಳನ್ನು ಅರಿಯಲು ಯಾವ ಅನುಕೂಲವೂ ಆಗುವುದಿಲ್ಲವೆಂಬ ಅಭಿಪ್ರಾಯವಿದೆ. "ಇ ಈ ಎ ಏ ಉ ಊ ಒ ಓ ಅ ಆ" ಎಂದು ಇನ್ನೊಂದು ಬಗೆಯಲ್ಲಿಯೂ ಬರೆಯುವುದುಂಟು. ಇಲ್ಲಿ ಸ್ವರಗಳನ್ನು ನಾಲಗೆಯ ತುದಿಯಿಂದ ಕೊನೆಯ ತನಕ ಅವುಗಳು ಹೊರಡುವ ನಾಲಗೆಯ ಭಾಗಕ್ಕೆ ಅನುಕ್ರಮವಾಗಿ ಬರೆಯಲಾಗಿದೆ. 
ಅಂದರೆ "ಇ ಈ" ನಾಲಗೆಯ ತುತ್ತುದಿಯಿಂದ ಉಲಿದರೆ, "ಅ ಆ" ನಾಲಗೆಯ ಕಟ್ಟಕಡೆಯಲ್ಲಿ ಹೊರಡುವುದು. ೠ, ಱ, ೞ ಗಳನ್ನು ಬಿಟ್ಟಮಾತ್ರಕ್ಕೆ ಆ ಅಕ್ಷರಗಳು ಕನ್ನಡದಲ್ಲಿ ಇಲ್ಲ ಅಥವಾ ಜನರಿಗೆ ಉಚ್ಚರಿಸಲಾಗದೆಂದು ಹೇಳಲಾಗದು. 

ಸ್ವರಗಳಲ್ಲಿ ನಾಲ್ಕು ವಿಧ 
· ಹೃಸ್ವಸ್ವರ/ಗಿಡ್ಡಸ್ವರ : ಒಂದು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ಹೃಸ್ವ ಅಂದರೆ ಚಿಕ್ಕದು. ಒಂದು ಹ್ರಸ್ವ ಸ್ವರವನ್ನು ಉಳಿಯಲು (ಉಚ್ಚಾರ ಮಾಡಲು) ಬರಿ ಒಂದು ಮಾತ್ರೆಯಷ್ಟು( ಒಂದು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು ) ಹೊತ್ತು ಬೇಕಾಗುವುದು. ಹೃಸ್ವ ಸ್ವರಗಳು : ಅ ಇ ಉ ಋ ಎ ಒ 

· ದೀರ್ಘಸ್ವರ/ಉದ್ದಸ್ವರ : ಎರಡು ಮಾತ್ರೆಯ ಕಾಲಾವಧಿಯಲ್ಲಿ ಉಚ್ಛರಿಸುವ ಅಕ್ಷರ. ದೀರ್ಘ ಅಂದರೆ ಉದ್ದದ್ದು ಎಂದು. ಒಂದು ದೀರ್ಘ ಸ್ವರವನ್ನು ಉಲಿಯಲು ಎರಡು ಮಾತ್ರೆಯಷ್ಟು(ಎರಡು ಸರತಿ ಕಣ್ಣು ಮಿಟುಕುವಷ್ಟು/ಎವೆಯಿಕ್ಕುವಷ್ಟು) ಹೊತ್ತು ಬೇಕಾಗುವುದು. ದೀರ್ಘ ಸ್ವರಗಳು: ಆ ಈ ಊ ಏ ಐ ಓ ಔ 

· ಪ್ಲುತ ಸ್ವರ : ಮೂರು ಇಲ್ಲವೆ, ಅದಕ್ಕಿಂತ ಹೆಚ್ಚು ಮಾತ್ರೆಗಳ ಹೊತ್ತು ಉಳಿಯುವ ಸ್ವರ. 
· ಸಂಧ್ಯಕ್ಷರ : ಎರಡು ಸ್ವರಗಳಿಂದ ಉಂಟಾಗುವ ಅಕ್ಷರಗಳು. ಐ, ಔ, ಏ, ಓ 


ಯೋಗವಾಹಗಳು 
ಸ್ವತಂತ್ರವಾಗಿ ಪ್ರಯೋಗಿಸಲಾಗದೆ, ಯಾವುದಾದರು ಸ್ವರದೊಂದಿಗೆ ಮಾತ್ರ ಪ್ರಯೋಗ ಮಾಡಬಹುದಾದ ಅಕ್ಷರಗಳು. ಕನ್ನಡ ವರ್ಣಮಾಲೆಯಲ್ಲಿ ನಾಲ್ಕು ಯೋಗವಾಹಗಳಿದ್ದರೂ ಎರಡು ಯೋಗವಾಹಗಳು ಮಾತ್ರ ಬಳಕೆಯಲ್ಲಿವೆ. 

1. ಅನುಸ್ವಾರ/ಬಿಂದು (ಅಂ) ಮತ್ತು 
2. ವಿಸರ್ಗ (ಅಃ) 
3. ಉಪಾಧ್ಮಾನೀಯ ‍: ೲ 
4. ಜಿಹ್ಹಾಮೂಲೀಯ : ೱ 

ಉದಾಹರಣೆಗೆ: ವಿವಿಧ ಸ್ವರಗಳೊಡನೆ ಅನುಸ್ವಾರ: ಅಂಜೂರ, ಆಂಧ್ರಪ್ರದೇಶ, ಇಂಚರ, ಉಂಗುರ, ಎಂಬತ್ತು, ಒಂಟೆ, ಓಂಕಾರ
ಕನ್ನಡದಲ್ಲಿ ಪದದ ನಡುವಿನಲ್ಲಿ ಬರುವ ಅನುನಾಸಿಕ ವ್ಯಂಜನಗಳ ಅರ್ಧಾಕ್ಷರ
 (ನ್, ಮ್ ಮುಂತಾದವು) ಬದಲು ಅನುಸ್ವರವನ್ನು ಬಳಸುವುದುಂಟು.
ಉದಾ: 
· ಅಙ್ಕ = ಅಂಕ ( ಇದನ್ನು ಅಮ್ಕ ಎಂದು ಉಲಿಯಬಾರದು ) 
· ಅಞ್ಚೆ = ಅಂಚೆ 
· ತಙ್ಗಿ = ತಂಗಿ 
· ಗಣ್ಟೆ = ಗಂಟೆ 
· ಅನ್ದ = ಅಂದ 
· ಅಮ್ಬ = ಅಂಬ
 
· ವಿವಿಧ ಸ್ವರಗಳೊಡನೆ ವಿಸರ್ಗ: ಅಂತಃಕರಣ, ದುಃಖ 

· ಅಚ್ಚ-ಕನ್ನಡ (ಹೊರನುಡಿಗಳ ಪದಗಳನ್ನು ಬಿಟ್ಟ ಕನ್ನಡ) ದಲ್ಲಿ ವಿಸರ್ಗವಿರುವ ಪದವಿಲ್ಲ.

ಶನಿವಾರ, ನವೆಂಬರ್ 07, 2020

ಕನ್ನಡ ಇತಿಹಾಸ (5/11)

ಕೃಪೆ: ಕನ್ನಡದ ವಿಕಿಪೀಡಿಯ

ಸ್ವರ 
ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬರುವ ವರ್ಣಮಾಲೆಯ ಮೊದಲ ಹದಿಮೂರು ಅಕ್ಷರಗಳನ್ನು ಸ್ವರ ಎಂದು ಕರೆಯುತ್ತಾರೆ.14-1=13
· ಕರ್ನಾಟಕ ಸರ್ಕಾರವು ತನ್ನ ಪಠ್ಯ ಕ್ರಮದಿಂದ ಸ್ವರವನ್ನು ಕನ್ನಡ ವರ್ಣಮಾಲೆಯಿಂದ ೧೯೯೦ ರಲ್ಲಿ ಬಿಟ್ಟಿತು. 

ಸ್ವರಗಳ ವಿಧ 
ಸ್ವರಗಳಲ್ಲಿ 2 ವಿಧ. ಅವು ಯಾವುವೆಂದರೆ ಹೃಸ್ವ ಸ್ವರಗಳು ಹಾಗೂ ದೀರ್ಘ ಸ್ವರಗಳು


ಹೃಸ್ವ ಸ್ವರ 
ಹೃಸ್ವ ಸ್ವರಗಳು (೬)ಆರು. ಒಂದು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ ಆರು ಅಕ್ಷರಗಳನ್ನು(ಅ,ಇ,ಉ,ಋ,ಎ,ಒ) ಹೃಸ್ವ ಸ್ವರಗಳೆಂದು ಕರೆಯುವರು. 

ದೀರ್ಘ ಸ್ವರ 
ಎರಡು ಮಾತ್ರೆಯ ಕಾಲದಲ್ಲಿ ಉಚ್ಛರಿಸಲ್ಪಡುವ ವರ್ಣಮಾಲೆಯ (೭)ಏಳು ಅಕ್ಷರಗಳನ್ನು (ಆ,ಈ,ಊ,ಏ.ಐ.ಓ,ಔ) ದೀರ್ಘ ಸ್ವರಗಳೆಂದು ಕರೆಯುವರು. 


ವ್ಯಂಜನಗಳು
ಬೇರೊಂದು ಅಕ್ಷರದ ಸಹಾಯವಿಲ್ಲದೆ ಸ್ವತಂತ್ರವಾಗಿ ಉಚ್ಛರಿಸಲು ಬಾರದ ವರ್ಣಮಾಲೆಯ(೩೪) ಮುವತ್ತು ನಾಲ್ಕು ಅಕ್ಷರಗಳನ್ನು ವ್ಯಂಜನಗಳೆಂದು ಕರೆಯುವರು. ಪ್ರಮುಖವಾಗಿ ವ್ಯಂಜನಗಳಲ್ಲಿ ಎರಡು ವಿಧ. ಅವು ಯಾವುವೆಂದರೆ 

1. ವರ್ಗೀಯ ವ್ಯಂಜನಗಳು(೨೫: ಕ,ಚ,ಟ,ತ,ಪ-ವರ್ಗಗಳು) 
2. ಅವರ್ಗೀಯ ವ್ಯಂಜನಗಳು(೯-ಯ ಇಂದ ಳ ವರೆಗೆ) 

ವರ್ಗೀಯ ವ್ಯಂಜನಗಳು
ಒಂದು ವರ್ಗ ಅಥವಾ ಗುಂಪಿಗೆ ಸೇರಿಸಬಹುದಾದ ವರ್ಣಮಾಲೆಯ ಇಪ್ಪತ್ತೈದು(೨೫) ಅಕ್ಷರಗಳನ್ನು ವರ್ಗೀಯ ವ್ಯಂಜನ ಎಂದು ಕರೆಯುವರು. ಅವು ಯಾವುವೆಂದರೆ, 

1. ಕ-ವರ್ಗ, = ಕ, ಖ, ಗ, ಘ, ಙ.

2. ಚ-ವರ್ಗ, = ಚ, ಛ, ಜ, ಝ, ಞ.

3. ಟ-ವರ್ಗ ,= ಟ, ಠ, ಡ, ಢ, ಣ.

4. ತ-ವರ್ಗ, = ತ, ಥ, ದ, ಧ, ನ.

5. ಪ-ವರ್ಗ,= ಪ, ಫ, ಬ, ಭ, ಮ.

ಅವರ್ಗೀಯ ವ್ಯಂಜನಗಳು
ಒಂದು ಗುಂಪು ಅಥವಾ ಒಂದು ವರ್ಗಕ್ಕೆ ಸೇರಿಸಲು ಬಾರದ ವರ್ಣಮಾಲೆಯ ಕೊನೆಯ ಒಂಬತ್ತು ಅಕ್ಷರಗಳನ್ನು ಅವರ್ಗೀಯ ವ್ಯಂಜನಗಳೆಂದು ಕರೆಯುತ್ತಾರೆ.ಅವು ಯಾವುವೆಂದರೆ

-ಯ,ರ,ಲ,ವ,ಶ,ಷ,ಸ,ಹ,ಳ.

ಕನ್ನಡ ಒತ್ತಕ್ಷರಗಳು 
ಕನ್ನಡ ಒತ್ತಕ್ಷರಗಳು (೩೪)ಮುವತ್ನಾಲ್ಕು. ಅವು ಯಾವುವೆಂದರೆ: 

1. ಕ್ಕ ಖ್ಖ ಗ್ಗ ಘ್ಘ ಙ್ಙ

2. ಚ್ಚ ಛ್ಛ ಜ್ಜ ಝ್ಝ ಞ್ಞ

3. ಟ್ಟ ಠ್ಠ ಡ್ಡ ಢ್ಢ ಣ್ಣ

4. ತ್ತ ಥ್ಥ ದ್ದ ಧ್ಧ ನ್ನ

5. ಪ್ಪ ಫ್ಫ ಬ್ಬ ಭ್ಭ ಮ್ಮ

6. ಯ್ಯ ರ ಲ್ಲ ವ್ವ ಶ್ಶ ಷ್ಷ ಸ್ಸ ಹ್ಹ ಳ್ಳ

ಯೋಗವಾಹಗಳು 
ಸ್ವತಂತ್ರವಲ್ಲದ- ಹಾಗೂ ಸ್ವರವೂ ಅಲ್ಲದ,ವ್ಯಂಜನವೂ ಅಲ್ಲದ ಸ್ವರಾಕ್ಷರಗಳ ಅಂತ್ಯದಲ್ಲಿನ ಹಾಗೂ ವ್ಯಂಜನಗಳ ಆರಂಭಾಕ್ಷರಗಳ ನಡುವಿನ ಎರಡು ಅಕ್ಷರಗಳನ್ನು (ಅನುಸ್ವಾರ-೦,ವಿಸರ್ಗ-ಃ)ಯೋಗವಾಹಗಳೆಂದು ಕರೆಯುತ್ತಾರೆ. 

· ಹಳೆಗನ್ನಡದ ಮೂರು ಅಕ್ಷರಗಳಾದ ಱ, ೞ ಮತ್ತು (ನ್, ಇದಕ್ಕೆ ಯೂನಿಕೋಡ್ ಇಲ್ಲ) ಇವನ್ನು ಇಂದು ಹೆಚ್ಚಾಗಿ ಬಳಸುತ್ತಿಲ್ಲವಾದರೂ ಹಳೆಗನ್ನಡವನ್ನು ಓದಲು ಇವನ್ನು ತಿಳಿದಿರಬೇಕು. 
· ಇಂಗ್ಲಿಷ್‌ನ F ಮತ್ತು Z ಅಕ್ಷರಗಳಿಗೆ ಫ಼ ಮತ್ತು ಜ಼ (ಫ ಮತ್ತು ಜ) ಹೊಸ ಅಕ್ಷರಗಳು ಉಪಯೋಗಕ್ಕೆ ಬಂದಿವೆ.

ಗುರುವಾರ, ನವೆಂಬರ್ 05, 2020

ಕನ್ನಡ ಇತಿಹಾಸ (4/11)

ಕೃಪೆ: ಕನ್ನಡದ ವಿಕಿಪೀಡಿಯ

ಸಂಜ್ಞಾ ಪ್ರಕರಣ : 

ಕೇಶಿರಾಜನ ಸೂತ್ರದ ಪ್ರಕಾರ, ಅಕ್ಷರ ಮಾಲೆ/ವರ್ಣಮಾಲೆ ಎಂಬುದು ಒಂದು ಸಂಜ್ಞಾ ಪ್ರಕಾರವಾಗಿದೆ. ೪ 

ಕವಿಗಳ್ ಸ್ವರದಿಂ ವರ್ಗದಿ 
ನವರ್ಗದಿಂ ಯೋಗವಾಹದಿಂ ದೇಶಿಯಳು 
ದ್ಭವಮಪ್ಪ ವರ್ಣದಿಂ ಪಂ 
ಚ ವಿಧಂ ತಾನೆಂದು ತಿಳಿಸುವರ್ ಶುದ್ಧಗೆಯಂ 

ಸೂತ್ರ ವಿವರಣೆ:ಕವಿಗಳು ಸ್ವರದಿಂದ, ವರ್ಗಾಕ್ಷರಗಳಿಂದ, ಅವರ್ಗೀಯ ಅಕ್ಷರಗಳಿಂದ, ಯೋಗವಾಹ ಅಕ್ಷರದಿಂದದಿಂದ, ಮತ್ತು ದೇಶಿಯ ಅಕ್ಷರಗಳಿಂದ ಹುಟ್ಟಿರುವ ಐದು ವಿಧದ ಅಕ್ಷರಗಳನ್ನು ಶುದ್ಧಗೆ ಎಂದು ಹೇಳುತ್ತಾರೆ.


ಕನ್ನಡದ ಶುದ್ಧಾಕ್ಷರಗಳ ವಿಧಗಳು 

ಕೇಶಿರಾಜನ ಪ್ರಕಾರ ಕನ್ನಡ ಶುದ್ಧಗೆಯಲ್ಲಿ ಐದು ವಿಧಗಳು. ಅವುಗಳು ಕ್ರಮವಾಗಿ : ಸ್ವರ ಅಕ್ಷರಗಳು, ವರ್ಗೀಯ ವ್ಯಂಜನ ಅಕ್ಷರಗಳು, ಅವರ್ಗೀಯ ವ್ಯಂಜನ ಅಕ್ಷರಗಳು, ಯೋಗವಾಹ ಅಕ್ಷರಗಳು, ದೇಶಿಯ ಅಕ್ಷರಗಳು. ಆದರೆ ಕನ್ನಡ ಪಠ್ಯಾನುಸಾರ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿಗಳು ಒಟ್ಟು ಕನ್ನಡ ಅಕ್ಷರಗಳನ್ನು ಈ ಕೆಳಗಿನಂತೆ ಗ್ರಹಿಸಿಕೊಂಡಿದ್ದಾರೆ. 


ಕನ್ನಡ ವರ್ಣಮಾಲೆ      
ಕನ್ನಡ ವರ್ಣಮಾಲೆಯಲ್ಲಿ ೪೯+1 ಅಕ್ಷರಗಳಿವೆ. ಅವುಗಳನ್ನು ಮೂರು ಭಾಗಗಳಾಗಿ ವಿಂಗಡಿಸಲಾಗಿದೆ.
ಕನ್ನಡ ಅಕ್ಷರಮಾಲೆ
ಸ್ವರಗಳು
=13+1=14
ಯೋಗವಾಹಗಳು
= 2
ವ್ಯಂಜನಗಳು
= 25
ಅವರ್ಗೀಯ ವ್ಯಂಜನಗಳು
= 9

1. ಸ್ವರಗಳು - 13+1=14

2. ವ್ಯಂಜನಗಳು -25+9=34

3. ಯೋಗವಾಹಗಳು-02
14+34+02=50
ೠ - ಎಂಬ ಅಕ್ಷರವನ್ನು ಕಡಿಮೆ ಮಾಡಿ ಒಟ್ಟು - 49 ಅಕ್ಷರಗಳೆಂದು ಹೇಳುತ್ತಾರೆ.

ೠ - ಕನ್ನಡ ವರ್ಣಮಾಲೆಯ ಎಂಟನೇ ಅಕ್ಷರವಾಗಿದೆ.ಇದು ಒಂದು ಸ್ವರಾಕ್ಷರ.

ಕರ್ನಾಟಕ ಸರ್ಕಾರವು ತನ್ನ ಪಠ್ಯ ಕ್ರಮದಿಂದ ೠ ಸ್ವರವನ್ನು ಕನ್ನಡ ವರ್ಣಮಾಲೆಯಿಂದ ೧೯೯೦ ರಲ್ಲಿ ಬಿಟ್ಟಿತು.

ಬುಧವಾರ, ನವೆಂಬರ್ 04, 2020

ಕನ್ನಡ ಇತಿಹಾಸ (3/11)

ಕೃಪೆ: ಕನ್ನಡದ ವಿಕಿಪೀಡಿಯ

10-12ನೆಯ ಶತಮಾನ 

· ಕನ್ನಡ ಲಿಪಿ 10-12ನೆಯ ಶತಮಾನದಲ್ಲಿ ಕಲ್ಯಾಣಿ ಚಾಳುಕ್ಯರ ಶಾಸನಗಳಲ್ಲಿ ವಿಶೇಷ ಬದಲಾವಣೆಯನ್ನು ಹೊಂದಿ ಒಂದು ಮುಖ್ಯವಾದ ಹಂತವನ್ನು ಸೂಚಿಸುತ್ತಿವೆ. ಈ ಕಾಲದ ಕೆಲವು ಅಕ್ಷರಗಳು ಇನ್ನಷ್ಟು ದುಂಡಾಗಿದ್ದು ಆಧುನಿಕ ಕನ್ನಡ ಲಿಪಿಯ ಅಕ್ಷರಗಳ ಲಕ್ಷಣಗಳನ್ನು ವ್ಯಕ್ತಪಡಿಸುತ್ತದೆ. ಉದಾಹರಣೆಗಾಗಿ ಕ, ರ, ಯ ಮುಂತಾದ ಅಕ್ಷರಗಳ ಮೈಕಟ್ಟು ಹೆಚ್ಚು ಕಡಿಮೆ ಈಗಿನಂತೆಯೇ ಇದೆ. ಕೆಲವು ಅಕ್ಷರಗಳ ತಲೆಕಟ್ಟು ಕೋನಾಕೃತಿಯುಳ್ಳದಾಗಿದೆ. 

· ಚ, ವ, ಮ ಮುಂತಾದ ಅಕ್ಷರಗಳ ತಲೆಕಟ್ಟಿನ ಭಾಗ ಎರಡು ಭಾಗವಾಗಿ ಬೇರ್ಪಡೆಯಾಗಿದ್ದು ತಲೆಕಟ್ಟು ಬಲಭಾಗದ ರೇಖೆಗೆ ಹೊಂದಿ ಕೊಂಡಿರುತ್ತದೆ. ಅನೇಕ ಅಕ್ಷರಗಳ ತಲೆಕಟ್ಟು ಸ್ಪಷ್ಟವಾಗಿ ಎದ್ದುಕಾಣುವಂತಿದೆ. ಮುಂದೆ 12-13ನೆಯ ಶತಮಾನದಲ್ಲಿ ಹೊಯ್ಸಳ ಅರಸರ ಅನೇಕ ಶಾಸನಗಳನ್ನು ನುಣುಪಾದ ಕಲ್ಲಿನ ಹಲಗೆಗಳ ಮೇಲೆ ಅಲಂಕಾರಯುತವಾಗಿಯೂ ಕಲಾತ್ಮಕವಾಗಿಯೂ ಬರೆಯಲ್ಪಟ್ಟಿದ್ದು ಅಲ್ಲಿಯ ಅಕ್ಷರಗಳು ಬಹು ಸುಂದರವಾಗಿ ಕಾಣುತ್ತವೆ. 

· ಈ ಅಕ್ಷರಗಳನ್ನು ಸ್ಪಷ್ಟವಾಗಿಯೂ ಹೆಚ್ಚು ದುಂಡಾಗಿಯೂ ಬರೆಯಲಾಗಿದೆ. ಇಲ್ಲಿ ಕನ್ನಡ ಲಿಪಿ ಊರ್ಜಿತಾವಸ್ಥೆಯನ್ನು ಹೊಂದಿದೆಯೆಂದು ಹೇಳಬಹುದು. ಆದರೆ ಮುಂದಿನ 2-3 ಶತಮಾನಗಳ ಕಾಲದಲ್ಲಿ ಅಂದರೆ 14-16ನೆಯ ಶತಮಾನದ ವಿಜಯನಗರ ಅರಸರ ಶಾಸನಗಳಲ್ಲಿ ಅಕ್ಷರಗಳನ್ನು ಡೊಂಕು ಡೊಂಕಾಗಿ ಬರೆಯಲಾಗಿದ್ದು ಅವುಗಳ ಜೋಡಣೆಯ ವಿಷಯದಲ್ಲಿ ಅಷ್ಟು ಗಮನವನ್ನಿತ್ತಿಲ್ಲ. 

· ಆದುದರಿಂದ ಕಲ್ಯಾಣಿ ಚಾಳುಕ್ಯ ಹಾಗೂ ಹೊಯ್ಸಳರ ಕಾಲದ ಲಿಪಿಯ ಅಕ್ಷರಗಳಂತೆ ವಿಜನಗರ ಕಾಲದ ಲಿಪಿಯ ಅಕ್ಷರಗಳು ಅಂದವಾಗಿ ಕಾಣುವುದಿಲ್ಲ. ಆದರೂ ಈ ಕಾಲದ ಲಿಪಿಯ ಅಕ್ಷರಗಳು ಕನ್ನಡ ಲಿಪಿಯ ಬೆಳೆವಣಿಗೆಯ ದೃಷ್ಟಿಯಿಂದ ಗಮನಾರ್ಹವಾಗಿದೆ. ಅ, ಞ, ಣ, ಷ, ಳ ಮುಂತಾದ ಅಕ್ಷರಗಳು ಈಗಿನ ರೂಪಗಳನ್ನು ಹೆಚ್ಚಾಗಿ ಹೋಲುತ್ತವೆ. 

· ದ, ಡ, ಪ ಮುಂತಾದ ಅಲ್ಪಪ್ರಾಣದ ಅಕ್ಷರಗಳಿಗೆ ಕೆಳಗಡೆ ಒಂದು ರೇಖೆಯನ್ನು ಸೇರಿಸಿ ಧ, ಢ, ಫ, ಮುಂತಾದ ಮಹಾಪ್ರಾಣಗಳ ಸಂಜ್ಞೆಗಳನ್ನು ಸೂಚಿಸಲಾಗಿದೆ. ಇದುವರೆಗೆ ಅಕ್ಷರಗಳ ಮೇಲ್ಭಾಗದಲ್ಲಿ ಒಂದು ಚುಕ್ಕೆ ಅಥವಾ ಚಿಕ್ಕ ಬಿಂದುವಿನಿಂದ ಸೂಚಿಸಲ್ಪಡುತ್ತಿದ್ದ ಅನುಸ್ವಾರವನ್ನು ಆಯಾ ಅಕ್ಷರಗಳ ಬಲಗಡೆಗೆ ಅಷ್ಟೇ ಗಾತ್ರದ ಬಿಂದುವಿನಿಂದ ತೋರಿಸಲಾಗಿದೆ. 

· 18ನೆಯ ಶತಮಾನದಲ್ಲಿ ಮೈಸೂರು ಅರಸರ ಕಾಲದಲ್ಲಿ ಕನ್ನಡ ಲಿಪಿ ವಿಜಯನಗರ ಕಾಲದ ಅಕ್ಷರಗಳ ಕೆಲವು ಲಕ್ಷಣಗಳನ್ನು ಉಳಿಸಿಕೊಂಡಿದ್ದರೂ ಆಧುನಿಕ ಕನ್ನಡ ಲಿಪಿಗೆ ಬಹಳ ಹತ್ತಿರಬಾಗಿ ತೋರುತ್ತದೆ. ಇತ್ತೀಚೆಗೆ ಮುದ್ರಣ ಬಂದಮೇಲೆ ಇತರ ಲಿಪಿಗಳಂತೆ ಕನ್ನಡ ಲಿಪಿಯಾದರೂ ಒಂದು ಸ್ಥಿರತೆಯನ್ನು ಹೊಂದಿದ್ದರಿಂದ ಹೆಚ್ಚಿನ ವಿಕಾಸಕ್ಕೆ ಅಸ್ಪದವಿಲ್ಲದಂತಾಗಿದೆ. ಆದರೂ ಮುದ್ರಣದ ಲಿಪಿಯಲ್ಲಿ ಸಹ ಕಾಲಕಾಲಕ್ಕೆ ಕೆಲವು ಸುಧಾರಣೆಗಳನ್ನು ಮಾಡಿಕೊಂಡು ಹೆಚ್ಚಿನ ಅಂದವಾದ ಅಕ್ಷರಗಳನ್ನು ಅಚ್ಚು ಹಾಕುತ್ತಿರುವುದನ್ನು ನೋಡುತ್ತೇವೆ. 

ಪರಿಣಾಮ 

· ಕನ್ನಡ ಲಿಪಿಯ ಒಂದು ವೈಶಿಷ್ಟ್ಯವೆಂದರೆ ಪ್ರಾಚೀನಕಾಲದಿಂದಲೂ ಕಾಗುಣಿತಾಕ್ಷರದ ಹೃಸ್ವ ಮತ್ತು ದೀರ್ಘ ಎ ಮತ್ತು ಏ ಕಾರಗಳನ್ನು ಹಾಗೂ ಒ ಮತ್ತು ಓ ಕಾರಗಳನ್ನು ಒಂದೇ ಸಂಜ್ಞೆಯಿಂದ ಸೂಚಿಸುತ್ತಿದ್ದು ಅವುಗಳಲ್ಲಿಯ ಹೃಸ್ವ ಮತ್ತು ದೀರ್ಘ ವರ್ಣಗಳ ಭೇದವನ್ನು ಸಂದರ್ಭಾನುಸಾರವಾಗಿ ತಿಳಿದುಕೊಳ್ಳಬೇಕಾಗಿತ್ತು. 

· ಇತ್ತೀಚೆಗೆ ಅಂದರೆ 17-18ನೆಯ ಶತಮಾನದಂದೀಚೆಗೆ ಮಾತ್ರ ಕಾಗುಣಿತಾಕ್ಷರದ ದೀರ್ಘ ಏ ಕಾರ, ದೀರ್ಘ, ಓ ಕಾರ ಮತ್ತು ದೀರ್ಘ ಈ ಕಾರಗಳನ್ನು ಆಯಾ ಅಕ್ಷರಗಳ ಬಲಗಡೆ ಕೋಡಿಯುಳ್ಳ ಒಂದು ರೇಖೆಯಿಂದ ಸೂಚಿಸಲಾಗಿದೆ. 

ಇನ್ನು 4-5ನೆಯ ಶತಮಾನದಿಂದ 13-14ನೆಯ ಶತಮಾನದವರೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶದ ಶಾಸನಗಳಲ್ಲಿ ಸುಮಾರು ಒಂದೇ ಮಾದರಿಯ ಲಿಪಿಯನ್ನು ಉಪಯೋಗಿಸಿದ್ದುದರಿಂದ ಇವೆರಡೂ ಭಾಗದ ಲಿಪಿಗಳಿಗೆ ಕನ್ನಡ ತೆಲುಗು ಲಿಪಿಯೆಂದು ಹೇಳುವುದುಂಟು. ಅದರಲ್ಲೂ ವಿಶೇಷವಾಗಿ ಬಾದಾಮಿ ಚಳುಕ್ಯ, ರಾಷ್ಟ್ರಕೂಟ ಮತ್ತು ಕಲ್ಯಾಣಿ ಚಾಳುಕ್ಯರ ಕಾಲದ ಕನ್ನಡ ತೆಲುಗು ಲಿಪಿ ಒಂದೇ ಸ್ವರೂಪದ್ದಾಗಿದೆಯೆಂದು ಹೇಳಬಹುದು. 

· 14-15ನೆಯ ಶತಮಾನಗಳಲ್ಲಿ ಕನ್ನಡ ಮತ್ತು ತೆಲುಗು ಲಿಪಿಗಳಲ್ಲಿ ಕೆಲವು ವ್ಯತ್ಯಾಸಗಳು ತಲೆದೋರಿದ್ದು ಮುಂದಿನ ಎರಡು ಮೂರು ಶತಮಾನಗಳಲ್ಲಿ ಗಮನಾರ್ಹವಾದ ಭೇದಗಳು ಕಂಡುಬರುತ್ತವೆ. ಆದರೂ ಅಲ್ಪ ಪ್ರಯತ್ನದಿಂದ ಕನ್ನಡಿಗರು ತೆಲುಗು ಲಿಪಿಯನ್ನೂ ಅದರಂತೆ ಆಂಧ್ರರು ಕನ್ನಡ ಲಿಪಿಯನ್ನೂ ಸುಲಭವಾಗಿ ತಿಳಿದುಕೊಳ್ಳಬಹುದು. ಬಾದಾಮಿ ಚಳುಕ್ಯರ ಕಾಲದಲ್ಲ ಕನ್ನಡ ಲಿಪಿ ಮಹಾರಾಷ್ಟ್ರ ಮತ್ತು ಗುಜರಾತ್ ಪ್ರಾಂತ್ಯಗಳಲ್ಲಿಯೂ ಪ್ರಚಲಿತವಿದ್ದು ಮುಂದೆ ಅಲ್ಲಿ ನಾಗರೀ ಲಿಪಿ ಬಳಕೆಗೆ ಬಂತು. * ಅಂತೂ ಮೇಲಿನ ವಿವೇಚನೆಯಿಂದ ಕನ್ನಡ ಲಿಪಿ ಸು. 2000 ವರ್ಷಕ್ಕೂ ಹೆಚ್ಚಿನ ಪರಂಪರೆಯುಳ್ಳದ್ದಾಗಿದೆಯೆಂದು ವಿಶದವಾಗುತ್ತದೆ. ಒಂದು ಲಿಪಿಯ ಹುಟ್ಟು ಮತ್ತು ಬೆಳೆವಣಿಗೆ ಅದನ್ನು ಉಪಯೋಗಿಸುವ ಜನರ ಸಂಸ್ಕೃತಿಯ ಪ್ರತೀಕವಾಗಿರುತ್ತದೆ. ಒಂದು ಆದರ್ಶ ಲಿಪಿಯಲ್ಲಿ ಪ್ರತಿಯೊಂದು ಶಬ್ದದ ಉಚ್ಚಾರಣೆಗೆ ಅಸಂದಿಗ್ಧವಾದ ಸಂಜ್ಞೆಯಿರಬೇಕು. ಬರೆದಂತೆ ಓದುವಂತಿರಬೇಕು. ಓದಿದಂತೆ ಬರೆಯುವಂತೆಯೂ ಇರಬೇಕು. 

· ಅಂದರೆ ಉಚ್ಚಾರಿತ ಅಕ್ಷರ ಹಾಗೂ ಲಿಖಿತ ವರ್ಣ ಇವುಗಳ ಸಂಬಂಧ ಸಂಪುರ್ಣವಿರಬೇಕು. ಈ ದೃಷ್ಟಿಯಿಂದ ವಿಚಾರಿಸಿದರೆ ಕನ್ನಡ ಲಿಪಿ ಪರಿಪುರ್ಣತೆಯನ್ನು ಪಡೆದಿದೆಯೆಂದು ಹೇಳಬಹುದು. ಈ ಲಿಪಿಯಲ್ಲಿ ಸ್ವರ ಮತ್ತು ವ್ಯಂಜನಗಳು ಪುರ್ಣವಾಗಿದ್ದು ಆರ್ಯ ಮತ್ತು ದ್ರಾವಿಡ ಭಾಷೆಗಳ ಧ್ವನಿಗಳನ್ನು ಕೊರತೆಯಿಲ್ಲದೆ ಸೂಚಿಸಲಿಕ್ಕೆ ಉಪಯುಕ್ತವಾದ ಸಂಕೇತಗಳಿವೆ. ವ್ಯಂಜನಾಕ್ಷರಗಳೊಡನೆ ಸ್ವರಗಳ ಸುಂದರವಾದ ಸಂಯೋಗವಿದೆ. 

· ಹೀಗೆ ಕನ್ನಡ ಲಿಪಿ ಅಶೋಕನ ಬ್ರಾಹ್ಮೀಲಿಪಿಯಿಂದ ಉದ್ಬವಿಸಿ ಕಾಲಕ್ರಮದಿಂದ ಅನೇಕ ಮಾರ್ಪಾಟುಗಳನ್ನು ಹೊಂದಿ ವೈವಿಧ್ಯಪುರ್ಣವಾದ ವಿಕಾಸವನ್ನು ಪಡೆದು ಸಾಹಿತ್ಯ-ಸಂಸ್ಕೃತಿಗಳ ಹಿರಿಮೆಯನ್ನು ವ್ಯಕ್ತಪಡಿಸುತ್ತದೆ. ಕನ್ನಡ ವರ್ಣಮಾಲೆಯ ಪ್ರತಿಯೊಂದು ಅಕ್ಷರದ ಉಗಮ, ವಿಕಾಸ, ಉಚ್ಚಾರಣೆ ಮುಂತಾದ ವಿವರಗಳು ಆಯಾ ಅಕ್ಷರಗಳ ಶೀರ್ಷಿಕೆಗಳಲ್ಲಿ ಬಂದಿವೆ. ಅವನ್ನು ನೋಡಬಹುದು. ಈಚೆಗೆ ಪರಭಾಷೆಯ ಪದಗಳನ್ನು ಎರವಲಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಒದಗಿಬಂದುದರಿಂದ ಈಚಿಣheಡಿ, ಈಚಿisಚಿಟ, Zoo, ಒಚಿಟಿ ಮೊದಲಾದುವನ್ನು; ಬರೆಯಲು ವಿಶಿಷ್ಟ ಸಂಜ್ಞೆಗಳನ್ನು ಬಳಸಲಾಗುತ್ತಿದೆ.
ಉದಾ : ಫಾದರ್, ಫೈಸಲ್ ಜóÆ, ಮ್ಯಾನ್-ಹೀಗೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು