ವಚನಕಾರ
|
ಕೂಡಲಸಂಗಮೇಶ್ವರ
|
ಅಂಕಿತ ನಾಮ
|
ಕೂಡಲಾದಿ ಚೆನ್ನಸಂಗಮದೇವ |
ಕಾಲ
|
|
ದೊರಕಿರುವ ವಚನಗಳು
|
198 (ಆಧಾರ: ಸಮಗ್ರ ವಚನ ಸಂಪುಟ) |
ತಂದೆ/ತಾಯಿ
|
|
ಹುಟ್ಟಿದ ಸ್ಥಳ
|
|
ಪರಿಚಯ
|
ಅಯ್ಯಾ, ಜೀವಾತ್ಮ ಭೇದವಾದಮಂ ಪೇಳ್ವೆನಯ್ಯಾ :
ಜೀವ ಬೇರೆ, ಆತ್ಮ ಬೇರೆ ಎಂದು ಹೇಳುವ[ವು] ಹಲವು ಶಾಸ್ತ್ರ ;
ಜೀವಾತ್ಮ ಐಕ್ಯ ಹೇ[ಳುವವು] ಹಲವು ಶಾಸ್ತ್ರ.
ಅ[ದು] ಎಂತೆಂದಡೆ:
ಸರ್ವ ಚೇತನದಲ್ಲಿಯು ಉಂಟು ಎಂದು ಹೇಳುವವು ಜೀವವು,
ಶಿವಶಾಸ್ತ್ರ ಇದಕ್ಕೆ ಸಾಕ್ಷಿ :
ಅಣೋರಣೀಯಾ[ನ್] ಮಹತೋ ಮಹೀಯಾ[ನ್]
ಎಂದು ಶ್ರುತಿಯುಂಟಾಗಿ, ಇದಂ ತಿಳಿದು, ಭೇದವಾದಿಗಳು
ಸರ್ವಜೀವರಲ್ಲಿಯು ಆತ್ಮವುಂಟಾದಡೆಯು
ಪಶುಜೀವಜಂತುಗಳಿಗೆ ನಮಸ್ಕಾರವ ಮಾಡಬಾರದೆ ? ಎಂದು
ಹೇಳುವ ಮಾಯಾವಾದಿಗಳು ನೀವು ಕೇಳಿ ;
ಅದು ಎಂತೆಂದಡೆ :
ಎಲಾ ಎಲಾ, ಉಚ್ಫಿಷ್ಟದಲ್ಲಿಯು ಅರ್ಕನ ಪ್ರಭೆ ಬಿದ್ದು ರಸ ಬತ್ತುವದು.
ಅದರ ರಸಾಸ್ವಾದವು ಅರ್ಕಂಗೆ ಮುಟ್ಟುವುದೆ ?
ಎಲಾ ಎಲಾ, ಸಿಲಹದಲ್ಲಿಯು ಸೂರ್ಯಪ್ರಭೆಯುಂಟು.
ಅಲ್ಲಿ ವಹ್ನಿಯು ಪುಟ್ಟುವು]ದೆ?]
ಇದರಂತೆ, ಸರ್ವ ಜೀವಜಂತುಗಳಲ್ಲಿ
ಮಾಯಾವಾದಿಗಳಲ್ಲಿ
ಆತ್ಮಪರೀಕ್ಷೆಯಿಲ್ಲದವರಲ್ಲಿ
[ದು]ಷ್ಟ ದುರ್ಜನರಲ್ಲಿ
ಶಿವಭಕ್ತರಾಗಿ ಲಿಂಗವ ಧರಿಸಿ
ದೇವರಾದರು ಸರಿಯೆ,
[ಬ್ರಾ]ಹ್ಮರಾಗಿ ಯಜ್ಞೋಪವೀತವ
ಹಾಕಿಕೊಂಡಿದ್ದರು ಸರಿಯೆ,
ಯತಿಗಳಾಗಿ ಮಂಡೆ ಬೋಳಿಸಿಕೊಂಡಿದ್ದರು ಸರಿಯೆ,
ಮಾರ್ಗ ತಪ್ಪಿ ನಡೆವ ಜೀವಜಂತುಗಳಲ್ಲಿ
ಸಿಲಹ ಉಚ್ಫಿಷ್ಟದ ಮೇಲೆ ಸೂರ್ಯನ ಪ್ರಭೆ ಬಿದ್ದಂತೆ
ಆತ್ಮ ಇದ್ದ ಕಾರಣ ಇವರಿಗೆ ಕೈಮುಗಿಯಲಾಗದು ಕಾಣಿರಯ್ಯಾ !
ಇ[ವ]ರೊಳಗೆ ಶಿವಯೋಗಿಗಳು ದಾರೆಂದು ಕೇಳುವ
ಮಾಯಾವಾದಿ ಕೇಳಲಾ.
ಅದು ಎಂತೆಂದಡೆ:
ಸೂರ್ಯನ ಪ್ರಕಾಶಕ್ಕೆ ಬಿಲದ್ವಾರವ ಸಿಲಹಂ ಪಿಡಿಯೆ
ಅರ್ಕನ ಪ್ರಕಾಶಕ್ಕೆ ವಹ್ನಿ ಪುಟ್ಟೆ
ಸರ್ವಕಾಷ*ವನು ಸುಡುವದು ಕಾಣೆಲಾ.
ಶಿವಾತ್ಮ ಐಕ್ಯವ ಮಾಡಿದಾ ಶಿವಯೋಗಿಗಳಲ್ಲಿ
ಸರ್ವಕರ್ಮೇಂದ್ರಿಯ ಈ ತೆರದಲ್ಲಿ ಸುಟ್ಟ ಕಾರಣ
ನಿರ್ಮಳಕಾಯರಾದರು.
ಇಂತಪ್ಪ ಜೀವಾತ್ಮವ ಐಕ್ಯವ ಮಾಡಿದ ಶಿವಯೋಗಿಗಳಲ್ಲಿ
ನಮಸ್ಕರಿಸಬಹುದು.
ಇಂತಾ ಜೀವಾತ್ಮ ವೇದವ ತಿಳಿಯದೆ
'ನಾ ಬ್ರಾಹ್ಮಣ' 'ನಾ ಶಿವಭಕ್ತ'ನೆಂದು ಹೇಳಿಕೊಂಡು ತಿರುಗುವ
ಮೂಳ ಹೊಲೆಯರ ಮುಖವ ನೋಡಲಾಗದು ಕಾಣೋ
ಕೂಡಲಾದಿ ಚನ್ನಸಂಗಮದೇವಾ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.