ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಅಕ್ಟೋಬರ್ 31, 2021

ನಮ್ಮ ಕನ್ನಡ ನಾಡು

ಕನ್ನಡ ನಾಡಿನ ಅಂದವ ನೋಡ
ಸಾಹಿತ್ಯ ಸಂಸ್ಕೃತಿಯ ಕಲೆ ಬೀಡ
ಮನ ತಣಿಸುವ ಹಚ್ಚ ಹಸಿರು
ಮಲೆನಾಡಿನ ಸೌಂದರ್ಯದುಸಿರು

ಜೋಗಿನ ಜಲಪಾತದ ಸೊಬಗಿನ ಇಂಪು
ಪಂಚ ಕೋಟಿ ಜನರಾಡುವ ಕನ್ನಡದ ಕಂಪು
ಬೇಲೂರು ಹಳೇಬೀಡು ಮೈಸೂರು
ಸದಾ ಆಕರ್ಷಿಸಿಸುವ ತವರೂರು

ಸುಂದರ ಇತಿಹಾಸ ಸೃಷ್ಟಿಸಿದ ನಾಡು
ಕಲೆ ವಾಸ್ತುಶಿಲ್ಪ ಸಾಹಿತ್ಯದ ಬೀಡು
ವಿದೇಶಿಯರು ಹೊಗಳುವ ಮೈಸೂರು ದಸರ
ನಾಡಿನ ಜನತೆಯ ಸಂತಸದ ಸಡಗರ

ನಾಡನ್ನು ಕಟ್ಟಿದ ರಾಜರ ವೈಭವ
ಕವಿಗಳು ರಚಿಸಿದ ಸಾಹಿತ್ಯ ಭಂಡಾರ
ಪ್ರವಾಸಿಗರ ಕೈ ಬೀಸಿ ಕರೆಯುವ ತಾಣ
ನೆಲೆಯೂರಲು ಯೋಗ್ಯವಾದ ವಾಸಸ್ಥಾನ

ನೀ ಒಮ್ಮೆ ಬಂದು ನೋಡು ಬಾರ
ಕನ್ನಡನಾಡಿನ ಅಂದವ ಸವಿಯಬಾರ
-ಮಾಕೃಮ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು