ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಬುಧವಾರ, ಡಿಸೆಂಬರ್ 20, 2017

ದಿನಚರಿ



ದಿನವು ಬೇಗ ಏಳಬೇಕು
ಎದ್ದು ಹಲ್ಲನುಜ್ಜಬೇಕು
ಉಜ್ಜಿ ಮುಖವ ತೊಳೆಯಬೇಕು
ದಿನವು ಸ್ನಾನ ಮಾಡ ಬೇಕು

ದೇವರಿಗೆ ನಮಸ್ಕರಿಸಿ
ತಿಂಡಿಯನ್ನು ತಿನ್ನಬೇಕು
ಗುರುವಿಗೆ ನಮಸ್ಕರಿಸಿ
ಶಾಲೆಯಲ್ಲಿ ಕಲಿಯಬೇಕು

ಶನಿವಾರ, ಡಿಸೆಂಬರ್ 09, 2017

ರಾಮಯಾಣದ ಸ್ವಾರಸ್ಯ ಸಂಗತಿಗಳು 2

ಸೇತುವೆ ಕಟ್ಟಲು ಎಷ್ಟು ದಿನ ಬೇಕಾಯ್ತು ?
    ಭಾರತ-ಶ್ರೀಲಂಕಾ ನಡುವೆ ಇರುವ ರಾಮಸೇತು ಒಡೆಯಲು ಎರಡು ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆದರೆ ಅದನ್ನು ಕಟ್ಟಲು ರಾಮನ ಕಪಿಸೈನ್ಯ ತೆಗೆದುಕೊಂಡಿದ್ದು ಕೇವಲ ಐದು ದಿನ! ಸೇತುವೆಯನ್ನು ಕಟ್ಟಿದ್ದು ಕಪಿಸೈನ್ಯ ಎಂಬುದು ಕೂಡ ಪೂರ್ತಿ ನಿಜವಲ್ಲ. ಅದನ್ನು ನಿರ್ಮಿಸಿದ್ದು ರಾಮನ ಅಂತಃಶಕ್ತಿ. ಇಲ್ಲವಾದರೆ, ಯಾರಾದರೂ ಮಂಗಗಳನ್ನಿಟ್ಟುಕೊಂಡು ಸಮುದ್ರಕ್ಕೆ ಸೇತುವೆ ಕಟ್ಟಲು ಸಾಧ್ಯವೇ? ವಾಲ್ಮೀಕಿಗೆ ರಾಮನನ್ನು ಪವಾಡಪುರುಷನನ್ನಾಗಿ ಮಾಡಲು ಇಷ್ಟವಿರಲಿಲ್ಲ. ಅವನನ್ನು ಒಳ್ಳೆಯ ಮನುಷ್ಯನನ್ನಾಗಿ ಮಾಡಿ (ಪುರುಷೋತ್ತಮ) ಜನರಿಗೆ ಆದರ್ಶವಾಗಿ ನೀಡಬೇಕು ಎಂಬುದು ಅವರ ಮನಸ್ಸಿನಲ್ಲಿತ್ತು. ಹಾಗಾಗಿ ಕಪಿಗಳ ನೆರವಿನಿಂದ ರಾಮ ಸೇತುವೆ ಕಟ್ಟಿದ ಎಂಬಂತೆ ಬಿಂಬಿಸಿದರು. ಕೃಪೆ : ಕೆ.ಟಿ.ಆರ್

ಶುಕ್ರವಾರ, ಡಿಸೆಂಬರ್ 01, 2017

ದೂಧಗಂಗಾ ನದಿ

ದೂಧಗಂಗಾ ನದಿ ಕೃಷ್ಣಾ ನದಿಯ ಉಪನದಿಗಳಲ್ಲಿ ಒಂದು.ಇದು ಪಶ್ಚಿಮ ಘಟ್ಟದ ಸಿಂಧುದುರ್ಗ ಎಂಬಲ್ಲಿ ಹುಟ್ಟುತ್ತದೆ.ಅಲ್ಲಿಂದ ಪೂರ್ವಾಭಿಮುಖವಾಗಿ ಹರಿದು ಮಹಾರಾಷ್ಟ್ರದ ಕೊಲ್ಲಾಪುರಜಿಲ್ಲೆ ಮತ್ತು ಕರ್ನಾಟಕದ ಬೆಳಗಾಂ ಜಿಲ್ಲೆಗಳಲ್ಲಿ ಹರಿದು ಕೃಷ್ಣಾ ನದಿಯನ್ನು ಸೇರುತ್ತದೆ.ಈ ನದಿಗೆ ಕೊಲ್ಲಾಪುರ ಜಿಲ್ಲೆಯಲ್ಲಿ ಆಣೆಕಟ್ಟು ಕಟ್ಟಿ ಕಾಳಮ್ಮವಾಡಿ ಜಲಾಶಯವನ್ನು ನಿರ್ಮಿಸಲಾಗಿದೆ.

1.. ಜಾಹೀರಾತು

2.ಜಾಹೀರಾತು