ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಶನಿವಾರ, ನವೆಂಬರ್ 24, 2018

ಸ್ವಭಾವ

ತನ್ನದೇ ಅಕ್ಕನ ಗಂಡ
ಅವರವರ ಸ್ವಂತ ಗುಣ-ದೋಷ ಭಾವ
ಅವರವರ ಸ್ವಭಾವದಂತೆ ಭಾವವೂ ಬೆರೆ
ಇದೊಂದು ಹುಟ್ಟು ಗುಣ, ಸುಟ್ಟರೂ ಹೋಗದ್ದು
ಬೇರೆಯವರನ್ನು ಪ್ರಭಾವಿಸುವ ವ್ಯಕ್ತಿತ್ವದ ಅಂಶ
ರೂಪ ರೂಪಗಳನು ದಾಟಿದ ಸ್ವರೂಪ
ನಿರ್ವಾತಕ್ಕೆ ಅಭಾವವೇ ಸ್ವಭಾವ
ಪ್ರಶ್ನಿಸುವುದು ಹೆಂಡತಿಯ ಸ್ವಭಾವ, ಉತ್ತರಿಸದಿರುವುದು ಗಂಡನ ಸ್ವಭಾವ
ಕೆಟ್ಟ ಹೆಂಡತಿಯನ್ನಾದರೂ ಬಿಡಬಹುದು. ಕೆಟ್ಟ ಸ್ವಭಾವವನ್ನು ಬಿಡಲಾಗದು
ಸ್ವಭಾವವನ್ನು ಮೀರಲು ಸ್ವಂತ ಭಾವನಿಂದಲೂ ಸಾಧ್ಯವಿಲ್ಲ (ಸ್ವಭಾವೋ ದುರತಿಕ್ರಮಃ)
ಒಳ್ಳೆಯ ಸ್ವಭಾವದ ವ್ಯಕ್ತಿಗೆ ಮಗಳನ್ನು ಕೊಟ್ಟರೆ ಮಗಳೇನೋ ಸುಖವಾಗಿರಬಹುದು, ಅಳಿಯ...?
ಸ್ವಭಾವ ಬೇರೆಯಾದರೂ ಭಾವ ಒಂದಾದರೆ ಸಂಸಾರ ಸಸಾರ
ಸ್ವಭಾವವೆಲ್ಲ ಸ್ವಾಭಾವಿಕವೇ
ಬೇಕು ಬೇಕೆಂಬುದು ನರನ ಸ್ವಭಾವ, ಬೇಕೇ ಬೇಕೆಂಬುದು ನಾಗರಿಕರನ ಸ್ವಭಾವ

-ವಿಶ್ವನಾಥ ಸುಂಕಸಾಳ

ಗುರುವಾರ, ನವೆಂಬರ್ 22, 2018

ಅಮ್ಮ ಕರುಣೆಯ ಸಾಗರ

ಅವಳೊಂದು ಕರುಣೆಯ ಸಾಗರ
ಮಮತೆಯ ಆಗರ
ಸಿಹಿಯಂತ ಮಾತು ಬಲು ಮಧುರ
ಹೋಗೆನು ನಿನ್ನಿಂದ ನಾ ದೂರ
ನೀ ಅಗಲಿದಾಕ್ಷಣವೆ ಈ ಧರಣಿಗೆ ನಾ ಭಾರ
 
ಧರಣಿ ನಾ ಬಂದ ಗಳಿಗೆ
ಅಮ್ಮ ಎಂದಿತು ಈ ನನ್ನ ನಾಲಿಗೆ
ಅಂದೆ ಬೆಳೆಯಿತು ನಮ್ಮ ಸಲಿಗೆ
ನೀ ಇರಲು ನನ್ನೊಂದಿಗೆ ಸಿಹಿಯೂಟದ ಹೋಳಿಗೆ
ನಿನ್ನ ವಾತ್ಸಲ್ಯದಿಂದ ತುಂಬಿದೆ ನನ್ನ ಹೃದಯದ ಮಳಿಗೆ
 
ಹಸಿವೆಂಬ ಈ ನನ್ನ ಆರ್ತನಾದ
ತಟ್ಟಿತು ನಿನ್ನ ಮನಸ್ಸಿನ ಕದ
ಹಾಲು ಮಾಡಿ ಉಣಿಸಿದೆ ನಿನ್ನ ನೆತ್ತರು
ಮರೆಯನಮ್ಮ ಅದನ್ನು ನಾ ಸತ್ತರು
ಬಾಳೆಂಬ ಶಾಲೆಗೆ ನೀನೆ ಮೊದಲ ಗುರು
 
ಈ ನಿನ್ನ ಋಣವ ನಾ ಹೆಂಗ ತಿರಿಸಲಮ್ಮ
ನಿನಗಾಗೆ ಮುಡಿಪು ಈ ನನ್ನ ಜನ್ಮ
ಹಂಚಮ್ಮ ನಿನ್ನ ಒಲಿಮೆಯ ಪ್ರೀತಿ,
ನನ್ನಂತೆ ಇತರರಿಗೆ.
 
                                         
                                                                       ಇಂದ - ಎಂ.ಎಸ್.ಪರಶುರಾಮ

ಗುರುವಾರ, ನವೆಂಬರ್ 15, 2018

ಯಾರಿಂದ ಏನೇನು ಕಲಿಯಬೇಕು?

(1)  ಶ್ರವಣಕುಮಾರ  = ತಂದೆ-ತಾಯಿಗಳ ಸೇವೆ
(2) ಶ್ರೀ ರಾಮ         = ಮರ್ಯಾದೆ
(3) ಹನುಮಂತ       = ಆರಾಧಕನ ಸೇವೆ
(4) ಭೀಷ್ಮ             = ಬ್ರಹ್ಮಚರ್ಯೆ
(5) ಶ್ರೀ ಕೃಷ್ಣ          = ಗೆಳೆತನ
(6) ಏಕಲವ್ಯ          = ಗುರುಭಕ್ತಿ
(7) ಯುಧಿಷ್ಠಿರ        = ಧರ್ಮ
(8) ಕರ್ಣ              = ದಾನ
(9) ಮಹಾವೀರ      = ತಪಸ್ಸು
(10) ಹರೀಶ್ಚಂದ್ರ    = ಸತ್ಯ
(11) ಲಕ್ಷ್ಮಣ, ಭರತ ಹಾಗೂ ಶತ್ರುಘ್ನ = ಸೋದರ ವಾತ್ಸಲ್ಯ
(12) ಚಾಣಕ್ಯ                       = ಛಲ
(13) ಸೀತಾ                        = ಸಹನೆ
(14) ಸಾವಿತ್ರಿ ಮತ್ತು ಗಾಂಧಾರಿ = ಪತಿ ಪ್ರೇಮ
(15) ತೆನಾಲಿ ರಾಮಕೃಷ್ಣ        = ಹಾಸ್ಯ
(16) ಭೂದೇವಿ                    = ಕ್ಷಮೆ

1.. ಜಾಹೀರಾತು

2.ಜಾಹೀರಾತು