ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಫೆಬ್ರವರಿ 24, 2019

ಉಪ್ಪು

ಪ್ರಮಾಣದಲ್ಲಿ ವ್ಯತ್ಯಾಸವಾದಾಗ ಇದರ ಮಹತ್ವದ ಅರಿವಾಗುತ್ತದೆ
ಉಪ್ಪು ತಿಂದವನ ಮುಖವು ಬೆಪ್ಪು ತಕ್ಕಡಿಯಂಥಕ್ಕು
ಸಮುದ್ರದಲ್ಲಿ ದೊರೆಯುವುದರಿಂದ ಇದು ಮೀನಿನ ಬೆವರಿನಿಂದ ಉಂಟಾಗುವುದೆಂದು ಊಹಿಸಬಹುದು
ಯಾವ ಕಾಲಕ್ಕೂ ಸಪ್ಪೆಯೆನಿಸದ ಪದಾರ್ಥ
ನಮ್ಮ ದೇಹದ ಕಣ ಕಣದಲ್ಲೂ ಉಪ್ಪೇ ಇದೆ. ಬೆವರಿದಾಗ ತಿಳಿಯುತ್ತದೆ
ಉಪ್ಪಿನಲ್ಲಿ ಮೋಸ ಮಾಡುವ ದ್ರೋಹಕ್ಕೆ ಉಪ್ಪಾಯ ಎನ್ನಬಹುದು
ತಪ್ಪು ಮಾಡಿದರೆ ಒಪ್ಪಿಕೊಳ್ಳಬೇಕು,ಅಥವಾ ಉಪ್ಪು ಕೊಳ್ಳಬೇಕು
ಉಪ್ಪಿಗೆ ಪೆಪ್ಪರ್ ಬೆರೆಸಿ ತಿಂದರೆ ನೀರೂರಿಸುತ್ತೆ
ಉಪ್ಪಿಗಿಂಥ ರುಚಿಯಿಲ್ಲ ಎನ್ನುವವರು ಒಮ್ಮೆ ಉಪ್ಪಿನಕಾಯಿ ತಿಂದು ನೋಡುವುದು ಒಳಿತು

-ವಿಶ್ವನಾಥ ಸುಂಕಸಾಳ

ಶುಕ್ರವಾರ, ಫೆಬ್ರವರಿ 22, 2019

ಒಬ್ಬ ತಾಯಿ



ಒಬ್ಬ ತಾಯಿ ತನ್ನ ಮಕ್ಕಳಿಗಾಗಿ ಪಡುವ ಕಷ್ಟ ಅಪಾರವಾದದ್ದು ಅನ್ನೋದು ಸತ್ಯ. ಅಂತಹಾ ತಾಯಂದಿರಿಗಾಗಿ, ಪ್ರತಿಯೊಬ್ಬ ಮಹಿಳಾಮಣಿಯರಿಗಾಗಿ ಬರೆದ ಕೆಲವು ಸಾಲುಗಳಿವು,
 
 ಹಸುಗೂಸು ಹೆರುವಾಗ ನೀ ಕಷ್ಟಪಟ್ಟೆ
ಹೆತ್ತಕಂದನ ಕಂಡು ಸಂತಸವ ಪಟ್ಟೆ
ಹುಟ್ಟಿದ ಹಸುಗೂಸ ಒಲುಮೆಯಲಿ ಸಾಕಿ
ಒಲುಮೆ ಸಿರಿ ಸಂತಸವ ಅನುದಿನವು ಉಣಿಸಿ

ಎದ್ದು ಬಂದಿದ್ದೆ ನಡುರಾತ್ರಿಯಲಿ, ಕೇಳಿ ಕಂದನ ಕೂಗು
ರಟ್ಟೆನೋವಾದರೂ ನೀ ಬಿಡಲಿಲ್ಲ ತೊಟ್ಟಿಲ ತೂಗು
ರಚ್ಚೆಹಿಡಿದತ್ತಾಗ ತೋಳ ತೆಕ್ಕೆಯಲಿ ಮಲಗಿಸಿ
ಮುದ್ದು ಕಂದನ ನಿನ್ನ ಕಣ್ರೆಪ್ಪೆಯಲಿ ಇರಿಸಿ

ಅಯ್ಯೋ ಕಂದನ ಒಡಲು ಬಿಸಿಯಾಯ್ತು
ಹೆತ್ತಕರುಳಿನ ಕೂಗು, ಚಿಂತೆ ನೂರಾಯ್ತು
ಗುಡಿ ಗೋಪುರದಿ ಪೂಜೆ, ಮನೆ ದೇವರಲಿ ಹರಕೆ
ಕಂದನಿಗೆ ಗುಣಮಾಡು, ನಗುತರಿಸು ಮೊಗಕೆ

ಅಪಾರ ಪ್ರೀತಿಯ ಮೊಗೆದು ಬೊಗಸೆಯಲಿ ತುಂಬಿ
ಮಮಕಾರ ತೋರಿ ಮುತ್ತಿನ ಮಳೆ ಸುರಿಸಿ
ನೋವುಗಳ ನುಂಗಿ, ಸಂತಸವ ಉಣಬಡಿಸಿ
ಕಣ್ಣೀರನು ಮರೆಸಿ, ನೋವನ್ನು ತೊರೆಸಿ

ಕೂಸದು ಗೆದ್ದಾಗ ನೀನೂ ಸಂಭ್ರಮಿಸಿ
ಸಿಹಿಯೂಟ ಪ್ರೋತ್ಸಾಹ, ಕಂದನಿಗೆ ಹರಸಿ
ನಿನ್ನೊಲುಮೆಯ ಧಾರೆ ಹರಿದಿರಲಿ ನಿರಂತರ
ನೀಜೊತೆಯಲಿದ್ದರೆ ಸಂಭ್ರಮದ ಸಡಗರ
                                                                                                      Posted by Prashanth Urala. G

1.. ಜಾಹೀರಾತು

2.ಜಾಹೀರಾತು